ಉಮೇಶ್ ಜಾಧವ್ ರಾಜೀನಾಮೆ ಹಳೆಯ ಸರಕು: ಸಿಎಂ

Public TV
1 Min Read

ಬೆಂಗಳೂರು: ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡ್ತಾರೆ ಎಂಬುವುದು ಮೊದಲೇ ಗೊತ್ತಿತ್ತು. ರಾಜೀನಾಮೆಯ ವಿಷಯ ಹಳೆಯ ಸರಕು ಎಂದು ಹೇಳುವ ಮೂಲಕ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.

ಉಮೇಶ್ ಜಾಧವ್ ರಾಜೀನಾಮೆ ನಿರೀಕ್ಷಿತವಾಗಿತ್ತು. ಜಾಧವ್ ರಾಜೀನಾಮೆಯಿಂದ ಸರ್ಕಾರಕ್ಕೆ ಆತಂಕ ಇಲ್ಲ, ಸುಭದ್ರವಾಗಿದೆ. ಇನ್ನುಳಿದ ಬಂಡಾಯ ಶಾಸಕರಾದ ರಮೇಶ್ ಜಾರಕಿಹೊಳಿ, ನಾಗೇಂದ್ರ ಸೇರಿ ಯಾರೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭೆ ಸೀಟುಗಳ ಹಂಚಿಕೆಯಲ್ಲಿ ಸಮಸ್ಯೆಯಿಲ್ಲ. ನಮ್ಮ ನಡುವೆ ಸುಸೂತ್ರವಾಗಿ ಸೀಟುಗಳ ಹಂಚಿಕೆ ಆಗುತ್ತದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಎರಡೂ ಕಡೆಯವರು ಚರ್ಚಿಸಿ ತೀರ್ಮಾನ ಮಾಡ್ತೀವಿ ಅಂತ ಸ್ಪಷ್ಟಪಡಿಸಿದರು.

ಉಮೇಶ್ ಜಾಧವ್ ರಾಜೀನಾಮೆ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್, ಇಂದು ನನಗೆ ಹಬ್ಬದ ಡಬಲ್ ಖುಷಿಯಾಗುತ್ತಿದೆ. ಉಮೇಶ್ ಜಾದವ್ ಅವರೇ ಈ ಬಾರಿಯ ಕಲಬುರಗಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ನನ್ನನ್ನು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಲಿಸಿದ್ದರು. ಇದೀಗ ಉಮೇಶ್ ಜಾಧವ್ ಎದುರು ಖರ್ಗೆ ಅವರು ಸೋಲುತ್ತಾರೆ. ಚುನಾವಣೆಯಲ್ಲಿ ಉಮೇಶ್ ಜಾಧವ್ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *