ರವಿಪ್ರಕಾಶ್ ಬಂಧನವಾಗೋವರೆಗೆ ಅನ್ನ, ನೀರು ಮುಟ್ಟಲ್ಲ: ವಿಜಯಲಕ್ಷ್ಮಿ ಪಟ್ಟು

Public TV
2 Min Read

ಬೆಂಗಳೂರು: ನಟ ರವಿ ಪ್ರಕಾಶ್ ಬಂಧನವಾಗುವವರೆಗೂ ತಾನು ಅನ್ನ, ನೀರು ಮುಟ್ಟಲ್ಲ ಎಂದು ಸ್ಯಾಂಡಲ್‍ವುಡ್ ನಟಿ ವಿಜಯಲಕ್ಷ್ಮಿ ಪಟ್ಟು ಹಿಡಿದಿದ್ದಾರೆ.

ಈ ಬಗ್ಗೆ ವಿಡಿಯೋ ಮಾಡಿ ಮಾತನಾಡಿರುವ ವಿಜಯಲಕ್ಷ್ಮಿ, “ನನ್ನ ಪ್ರಾಣಕ್ಕೆ ಏನಾದರೂ ಹೆಚ್ಚು ಕಡಿಮೆ ಆದರೆ ಅದಕ್ಕೆ ರವಿಪ್ರಕಾಶ್ ಕಾರಣ ಆಗ್ತಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಯಾರೂ ನನಗೆ ಸಹಾಯ ಮಾಡುತ್ತಿಲ್ಲ. ರವಿಪ್ರಕಾಶ್ ಹೇಳಿಕೆಯಿಂದ ನನ್ನ ಇಪ್ಪತ್ತು ವರ್ಷದ ಸಿನಿಮಾ ಕೆರಿಯರ್‍ಗೆ ಡ್ಯಾಮೇಜ್ ಆಗಿದೆ. ರವಿಪ್ರಕಾಶ್ ಬಂಧನವಾಗುವ ತನಕ ಈ ಕ್ಷಣದಿಂದ ಅನ್ನ, ನೀರು ಕೂಡ ಮುಟ್ಟಲ್ಲ” ಎಂದು ಹೇಳಿದ್ದಾರೆ.

ಸದ್ಯ ನಟಿ ವಿಜಯಲಕ್ಷ್ಮಿ ನಗರದ ಅಲೋಪೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ:ನಟಿ ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಿಸಿದ ನಟ ರವಿಪ್ರಕಾಶ್

ಏನಿದು ಪ್ರಕರಣ?
ನಟಿ ವಿಜಯಲಕ್ಷ್ಮಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ವಿಜಯಲಕ್ಷ್ಮಿ ತಮಗೆ ನಟನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ಕೊಟ್ಟಿದ್ದರು. ನಟ ರವಿಪ್ರಕಾಶ್ ವಿರುದ್ಧ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದರು. ಅಷ್ಟೇ ಅಲ್ಲದೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ರವಿಪ್ರಕಾಶ್ ವಿರುದ್ಧ ದೂರು ನೀಡಿದ್ದರು. ಇದನ್ನೂ ಓದಿ: ಕಣ್ಣೀರು ಹಾಕಿ, ನಮ್ಮ ತಂದೆಯನ್ನು ನೋಡಿದಂತೆ ಆಯ್ತು ಎಂದಿದ್ರು – ಲೈಂಗಿಕ ಕಿರುಕುಳ ಆರೋಪಕ್ಕೆ ನಟ ಸ್ಪಷ್ಟನೆ

ನಾನು ಕಳೆದ ಕೆಲ ದಿನಗಳಿಂದ ಆನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಯುತ್ತಿದ್ದೇನೆ. ಹಣಕಾಸಿನ ನೆರವು ನೀಡಿ ಎಂದು ಸ್ಯಾಂಡಲ್‍ವುಡ್ ನ ಸ್ಟಾರ್ ನಟರಿಗೆ ಮನವಿ ಮಾಡಿಕೊಂಡಿದ್ದೆ. ಇದನ್ನು ನೋಡಿದ ನಟ ರವಿಪ್ರಕಾಶ್ ಫೆಬ್ರವರಿ 27ರಂದು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ, ಒಂದು ಲಕ್ಷ ನಗದು ಸೇರಿದಂತೆ ಬಟ್ಟೆ, ಊಟ, ತಿಂಡಿ ಸೇರಿದಂತೆ ಅವಶ್ಯಕ ವಸ್ತುಗಳನ್ನು ನೀಡಿದ್ದರು. ಇದಾದ ನಂತರ ಪ್ರತಿದಿನ ಆಸ್ಪತ್ರೆಯ ಐಸಿಯೂಗೆ ಬರೋದು, ಪದೇ ಪದೇ ಫೋನ್, ಮಸೇಜ್ ಮಾಡೋದು ಸೇರಿದಂತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ನಟಿ ದೂರಿನಲ್ಲಿ ಆರೋಪಿಸಿದ್ದರು. ಇದನ್ನೂ ಓದಿ: ನಟಿ ವಿಜಯಲಕ್ಷ್ಮೀಗೆ ನಟನಿಂದ ಲೈಂಗಿಕ ಕಿರುಕುಳ – ದೂರು ದಾಖಲು

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *