ಮಂಡ್ಯ: ನನಗೆ ಚುನಾವಣೆಗೆ ಓಡಾಟಗಳು ಅಭ್ಯಾಸವಿಲ್ಲ ಎಂದು ಸುಮಲತಾ ಅಂಬರೀಶ್ ಅವರು ತಮ್ಮ ಅಧಿಕೃತ ಫೇಸ್ಬುಕ್ ಖಾತೆಯ ಮೂಲಕ ಮನಸ್ಸಿನ ಭಾವನೆಯನ್ನು ಹೊರಹಾಕಿದ್ದಾರೆ.
ಸುಮಲತಾ ಅವರು ಅಭಿಮಾನಿಗಳು ಮತ್ತು ಮತದಾನರ ಜೊತೆ ಸಂವಹನ ಮಾಡಲು ಅಧಿಕೃತವಾಗಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದಾರೆ. ಈ ಖಾತೆಯ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕೂಡ ಮಾಡುತ್ತಿದ್ದಾರೆ. ಇಂದು ಕೂಡ ತಮ್ಮ ಮನಸ್ಸಿನ ಭಾವನೆಯನ್ನು ಅಭಿಮಾನಿಗಳ ಬಳಿ ಹೇಳಿಕೊಂಡಿದ್ದಾರೆ.
ಪೋಸ್ಟ್ ನಲ್ಲಿ ಏನಿದೆ?
ನನಗೆ ಚುನಾವಣೆಗೆ ಓಡಾಟಗಳು ಅಭ್ಯಾಸವಿಲ್ಲ. ಆದರೂ ನಾನು ಪ್ರತಿದಿನ ಹೊಸ ಶಕ್ತಿಯೊಂದಿಗೆ ಹೊಸ ಉತ್ಸಾಹದಿಂದ ಮುಂದಿನ ಚುನಾವಣಾ ಹೋರಾಟಕ್ಕೆ ಸಜ್ಜಾಗುತ್ತಿದ್ದೇನೆ. ಅದಕ್ಕೆ ಕಾರಣ ನನ್ನ ಶಕ್ತಿ ಉತ್ಸಾಹವೇ ನೀವುಗಳು. ನೀವೆಲ್ಲಾ ತೋರಿಸುತ್ತಿರುವ ಪ್ರೀತಿ ಎಂದು ಸುಮಲತಾ ಅವರು ಫೇಸ್ಬುಕ್ ಪೇಜಿನಲ್ಲಿ ಬರೆದುಕೊಂಡಿದ್ದಾರೆ.
ಕಳೆದ ದಿನ ಸುಮಲತಾ ಪುತ್ರ ಅಭಿಷೇಕ್ ಕೂಡ ಅಮ್ಮನ ಪರ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. “ನನ್ನ ಜನರಿಗಾಗಿ ನನ್ನ ಹೆಜ್ಜೆ. ಇಂದು ನಾನು ಮಳವಳ್ಳಿಗೆ ಬರುತ್ತಿದ್ದೇನೆ. ನನ್ನ ಅಪ್ಪ ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದ ಊರು ಮಳವಳ್ಳಿ. ನನ್ನ ತಾತ ಸಾಕಷ್ಟು ವರ್ಷಗಳ ಕಾಲ ಜೀವನ ನಡೆಸಿದ ಮಳವಳ್ಳಿಗೆ ನಾನು ಅಮ್ಮನೊಂದಿಗೆ ಬರುತ್ತಿದ್ದೇನೆ’ ಎಂದು ಬರೆದುಕೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv