ಬಾಂಗ್ಲಾ ಯುದ್ಧದಲ್ಲಿ ಪಾಕ್ ಶರಣಾಗಿದ್ದು ಗೊತ್ತಿಲ್ವ, ಅದಕ್ಕಿಂತ್ಲೂ ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್: ಮಾಜಿ ಸಿಎಂ

Public TV
1 Min Read

– ಕಾಂಗ್ರೆಸ್ ಅವಧಿಯಲ್ಲಿ 10-15 ಸರ್ಜಿಕಲ್ ಸ್ಟ್ರೈಕ್
– ಭಾವನಾತ್ಮಕ ವಿಚಾರ ಮುಂದಿಟ್ಟು ಬಿಜೆಪಿಯಿಂದ ರಾಜಕೀಯ

ಮೈಸೂರು: ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ. ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, “ಬಿಜೆಪಿ ಅವರು ರಾಜಕೀಯ ಲಾಭಕ್ಕೆ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಯಾರೂ ಕೂಡ ರಾಷ್ಟ್ರೀಯ ಭದ್ರತೆ ಬಗ್ಗೆ ಯಾರೂ ರಾಜಕೀಯ ಲಾಭ ಪಡೆದುಕೊಳ್ಳಬಾರದು. ಹಾಗೇ ಲೆಕ್ಕ ಹಾಕಿದರೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 11-12 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು” ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ. ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್ ಸ್ಟೈಕ್. ನಾವು ದೇಶದ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಯಾವತ್ತು ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಬಿಜೆಪಿ ಅವರಿಗೆ ಬುದ್ಧಿ ಇಲ್ಲ. ಏಕೆಂದರೆ ಅವರು ಇದರಲ್ಲಿ ಲಾಭ ಪಡೆಯುತ್ತಿದ್ದಾರೆ ಎಂದು ದೂರಿದರು.

ಬಿಜೆಪಿಯವರು ಯಾವತ್ತು ಅಭಿವೃದ್ಧಿ ವಿಚಾರದಲ್ಲಿ ರೈತರ ವಿಚಾರಲ್ಲಿ ಮತ ಕೇಳಿದ್ದಾರೆ?. ಭಾವನಾತ್ಮಕ ವಿಚಾರ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಾರೆ. ಈ ಬಾರಿ ಅವರು ಯಾವ ಅಭಿವೃದ್ಧಿಯನ್ನು ಮಾಡಿಲ್ಲ. ಹೀಗಾಗಿ ಈ ವಿಚಾರ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ನಿಂದ ತಮಗೆ ಲಾಭವಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದೆ. ಆದರೆ ಸರ್ಜಿಕಲ್ ಸ್ಟ್ರೈಕ್ ಮೊದಲು ಮೋದಿ ಹವಾ ಬಿದ್ದು ಹೋಗಿತ್ತಾ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *