ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣ – ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

Public TV
1 Min Read

– ಕೇಂದ್ರ ರಕ್ಷಣಾ ಇಲಾಖೆ ಬಗ್ಗೆ ಪ್ರಮೋದ್ ಸಂಶಯ

ಉಡುಪಿ: ನೌಕಾ ಸೇನೆ ಹಿಟ್ ಆಂಡ್ ರನ್ ಮಾಡಿದೆ. ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣ ಎಂದು ಉಡುಪಿ- ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಏಳು ಮಂದಿ ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣವಾಗಿದೆ. ಇದಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸಬೇಕು. ಶೋಭಾ ನಾಮಪತ್ರ ಸಲ್ಲಿಸುವಾಗ ನಿರ್ಮಲಾ ಸೀತಾರಾಮನ್ ಬರುತ್ತಾರಂತೆ. ಅಂದು ಮೀನುಗಾರರು ಕಾಣೆಯಾದ ಪ್ರಕರಣ ಏನಾಯ್ತು ಎಂದು ರಕ್ಷಣಾ ಸಚಿವರೇ ಉತ್ತರಿಸಬೇಕು ಅಂದ್ರು.

ನೊಂದ ಮನೆಯವರ ನೋವಿಗೆ ಯಾರು ಉತ್ತರಿಸುತ್ತಾರೆ. ಮೀನುಗಾರರು ಬದುಕಿದ್ದಾರೆಯೋ ಇಲ್ಲವೇ ಗೊತ್ತಿಲ್ಲ. ನಾಪತ್ತೆ ಹಿಂದೆ ನೌಕಾಸೇನೆಯವರ ಕೈವಾಡ ಇದೆ ಅನ್ನೋ ಸಂಶಯ ಇದೆ. ನೌಕಾಸೇನೆಯ ಶಿಪ್ ಬೋಟ್ ಗೆ ಅಪಘಾತ ಮಾಡಿದ ಸಂಶಯ ಇದೆ. ನೌಕಾಸೇನೆ ಸಮುದ್ರದಲ್ಲಿ ಹುಡುಕುವ ನಾಟಕ ಮಾಡಿದೆ. ಚುನಾವಣೆಯವರೆಗೆ ಈ ಸತ್ಯ ಮರೆಮಾಚುವ ಪ್ರಯತ್ನ ಇದು ಎಂದು ಆರೋಪಗಳ ಸುರಿಮಳೆಗೈದ್ರು.

ಮೀನುಗಾರ ಸಮುದಾಯಕ್ಕೆ ಕೇಂದ್ರ ಸರ್ಕಾರ ಏನೂ ಮಾಡಿಲ್ಲ. ಮೀನುಗಾರರ ನಾಪತ್ತೆಗೆ ಕೇಂದ್ರ ಸರ್ಕಾರ ಮತ್ತು ನಿರ್ಮಲಾ ಸೀತಾರಾನ್ ವೈಫಲ್ಯವೇ ಇದಕ್ಕೆ ನೇರ ಕಾರಣವಾಗಿದ್ದು, ರಕ್ಷಣಾ ಸಚಿವರೇ ಉತ್ತರಿಸಿ ಎಂದು ಪ್ರಮೋದ್ ಇದೇ ವೇಳೆ ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *