ಕಿಸಾನ್ ಸಮ್ಮಾನ್ ಯೋಜನೆಯನ್ನ ಪುಟಗೋಸಿಗೆ ಹೋಲಿಸಿದ ಸಂಸದ ಮೊಯ್ಲಿ

Public TV
1 Min Read

ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರಿಗೆ ಪುಟಗೋಸಿ 6 ಸಾವಿರ ರೂ. ಕೊಡುತ್ತಾರಂತೆ ಎಂದು ಹೇಳುವ ಮೂಲಕ ಸಂಸದ ವೀರಪ್ಪ ಮೊಯ್ಲಿ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಬಗ್ಗೆ ಟೀಕೆ ಮಾಡಿದ್ದಾರೆ.

ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ, ಯುಪಿಎ ಆಡಳಿತವಾಧಿಯಲ್ಲಿದ್ದ ನರೇಗಾ ಯೋಜನೆಯನ್ನ ಜಾರಿ ಮಾಡಿದ್ದೆವು. ಪ್ರತಿಯೊಬ್ಬ ಕೂಲಿಯಾಳುವಿಗೆ ಒಂದು ದಿನಕ್ಕೆ 212 ರೂ. ನೀಡುತ್ತಿದ್ದೇವು. ಒಂದು ಕುಟುಂಬದಲ್ಲಿ 5 ಮಂದಿ ಇದ್ದರೆ 1,500 ರೂ. ಹಣ ಸಿಗುತಿತ್ತು ಎಂದರು.

ದೇಶದ ಪ್ರಧಾನಿ ಮೋದಿ ಮೊನ್ನೆ ಜಾರಿ ಮಾಡಿದ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಪುಟಗೋಸಿ 6 ಸಾವಿರ ರೂ. ಹಣ ಕೊಡುತ್ತಾರಂತೆ. ಅದು ಆರು ಕಂತಿನಲ್ಲಿ ಹಾಕುತ್ತಾರಂತೆ ಎಂದರು. ಅಲ್ಲದೇ ಮೋದಿ ದುರ್ಬಲ ಪ್ರಧಾನಿಯಾಗಿದ್ದು, ದೇಶದ ಬಗ್ಗೆ ಪಾಕಿಸ್ತಾನದವರಿಗೆ ಭಯ ಹೋಗಿ ಬಿಟ್ಟಿದೆ. ಸರ್ಜಿಕಲ್ ಸ್ಟ್ರೈಕ್ ನಲ್ಲಿ ಎಷ್ಟು ಉಗ್ರಗಾಮಿಗಳು ಸತ್ತಿದ್ದಾರೆಂದು ಲೆಕ್ಕ ಕೊಡಲಿಕ್ಕೆ ಆಗುತ್ತಿಲ್ಲ. ಆದರೆ ಸುಮ್ಮನೆ ಬಡಾಯಿ ಕೊಚ್ಚಿಕೊಳುತ್ತಾರೆ ಎಂದರು.

ಕೃಷ್ಣ ನದಿ ನೀರು: ಇದೇ ವೇಳೆ ಆಂಧ್ರದ ಅನಂತಪುರಕ್ಕೆ ಬಂದಿರುವ ಕೃಷ್ಣ ನದಿ ನೀರನ್ನು ಬಯಲುಸೀಮೆಯ ಜಿಲ್ಲೆಗಳಿಗೆ ಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *