ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ- ಮಧ್ಯರಾತ್ರಿಯಲ್ಲಿ ತಪ್ಪಿದ ಭಾರೀ ಅನಾಹುತ

Public TV
1 Min Read

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ ಮಧ್ಯರಾತ್ರಿಯಲ್ಲಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಯಚೂರಿನ ಶಕ್ತಿನಗರದ KPC ಮೇನ್ ಗೇಟ್ ನ ಬಳಿ ನಡೆದಿದೆ.

ಮಂಗಳವಾರ ರಾತ್ರಿ ಸಾರಿಗೆ ಬಸ್ ರಾಯಚೂರಿನಿಂದ ಬಳ್ಳಾರಿಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಆಗಿದೆ. ಬಸ್‍ನಲ್ಲಿ ಸುಮಾರು 35ಕ್ಕೂ ಅಧಿಕ ಪ್ರಯಾಣಿಕರಿದ್ದರು. ಈ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.

ಬಸ್ ಪಲ್ಟಿ ಆಗಿದ್ದರಿಂದ ಕಂಡಕ್ಟರ್ ಹಾಗೂ ಡ್ರೈವರ್ ಸೇರಿದಂತೆ ಎಂಟು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಸದ್ಯ ಅಪಘಾತದಲ್ಲಿ ಗಾಯಗೊಂಡವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಶಕ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *