ತೆನೆ ತೊರೆದು ಕಮಲ ಹಿಡಿದ ಸಿಎಂ ಆಪ್ತ

Public TV
0 Min Read

ತುಮಕೂರು: ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಆಪ್ತರೊಬ್ಬರು ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.

ಸಿಎಂ ಕುಮಾರಸ್ವಾಮಿ ಆಪ್ತ ಚಿದಾನಂದ ಗೌಡ ಜೆಡಿಎಸ್ ಪಕ್ಷ ತೊರೆದು ಎಲ್ಲರಿಗೂ ಬಿಗ್ ಶಾಕ್ ಕೊಟ್ಟಿದ್ದಾರೆ. ಚಿದಾನಂದ ಇಂದು ವಿ. ಸೋಮಣ್ಣ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ.

ಚಿದಾನಂದ ಗೌಡ ಶಿರಾ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚಿದಾನಂದ ಗೌಡ ಶಿರಾ ತಾಲೂಕಿನಲ್ಲಿ ಜೆಡಿಎಸ್ ಪ್ರಬಲ ನಾಯಕನಾಗಿದ್ದು, ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ಆಪ್ತರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *