ಮೋದಿಗಾಗಿ ಯುವಕರಿಂದ ಪಾದಯಾತ್ರೆ

Public TV
1 Min Read

ಕೋಲಾರ: ಮತ್ತೊಮ್ಮೆ ಮೋದಿ, ಈ ದೇಶದ ಪ್ರಧಾನಿ ಆಗಬೇಕೆಂದು ಆಶಿಸಿ ಯುವಕರ ತಂಡವೊಂದು ಕೋಲಾರ ಲೋಕಸಭಾ ಕ್ಷೇತ್ರದಾದ್ಯಂತ ಪಾದಯಾತ್ರೆಯನ್ನು ಮಾಡುತ್ತಿದ್ದಾರೆ.

ಗುರುವಾರ ಮಾಲೂರುನಿಂದ ಪ್ರಾರಂಭಿಸಿರುವ ಆರು ಜನ ಯುವಕರ ತಂಡ ಟೇಕಲ್ ಮಾರ್ಗವಾಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು, ಕೋಲಾರ, ಶ್ರೀನಿವಾಸಪುರದಿಂದ ಚಿಂತಾಮಣಿ ಶಿಡ್ಲಘಟ್ಟ ಕ್ಷೇತ್ರಗಳವರೆಗೂ ಪಾದಯಾತ್ರೆ ಮಾಡಿದ್ದಾರೆ.

ಇನ್ನುಳಿದ ಏಳು ದಿನಗಳವರೆಗೂ ಪಾದಯಾತ್ರೆ ನಡೆಸಲಿದ್ದು, ಯಾವುದೋ ಒಂದು ಪಕ್ಷ ಅಭ್ಯರ್ಥಿಯ ಪರ ಮತಯಾಚಿಸದೆ, ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುಲಿದ್ದಾರೆ.

ಸ್ಥಳೀಯರೇ ಆಗಿರುವ ಇವರು ಬೆಂಗಳೂರಿನಲ್ಲಿ ಉದ್ಯೋಗ, ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಮೋದಿ ಅವರ ಆಡಳಿತಕ್ಕೆ ಮನಸೋತು ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ಪಾದಯಾತ್ರೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಪಾದಯಾತ್ರೆಯುದ್ದಕ್ಕೂ ಮೋದಿ ಅವರಿಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *