ಗಾಳಿ, ಗುಡುಗು ಸಹಿತ ಧಾರಾಕಾರ ಮಳೆ – ಮತದಾನಕ್ಕೆ ಅಡ್ಡಿ

Public TV
1 Min Read

-ಭಾರೀ ಪ್ರಮಾಣದ ಆಲಿಕಲ್ಲು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು, ಭಾರೀ ಮಳೆಯಿಂದಾಗಿ ಮತದಾನಕ್ಕೆ ಅಡ್ಡಿಯಾಗಿದೆ.

ಮುಂಡಗೋಡಿನಲ್ಲಿ ಅರ್ಧ ಗಂಟೆಗಳಿಂದ ಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಮತ ಚಲಾಯಿಸಲು ಬಂದ ಮತದಾರರಿಗೆ ತೊಂದರೆಯಾಗುತ್ತಿದೆ. ಒಂದು ವೇಳೆ ಮಳೆ ಹೀಗೆ ಮುಂದುವರಿದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಕಡಿಮೆಯಾಗುವ ಸಾಧ್ಯತೆ ಇದೆ.

ಇತ್ತ ಶಿರಸಿಯಲ್ಲೂ ಗುಡುಗು ಸಹಿತ ಭಾರೀ ಮಳೆ ಪ್ರಾರಂಭವಾಗಿದ್ದು, ಮಳೆಯ ಅಬ್ಬರಕ್ಕೆ ಐದಕ್ಕೂ ಹೆಚ್ಚು ಮರಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರಕ್ಕೆ ಮತದಾರರು ಮತಗಟ್ಟೆಗೆ ಬರುತ್ತಿಲ್ಲ. ಮಳೆಯಿಂದ ಮತದಾನ ಇಳಿಮುಖವಾಗಿದೆ. ಒಂದು ಕಡೆ ಮಳೆಯಾದರೆ, ಮತ್ತೊಂಡೆ ಮಳೆಯ ಅಬ್ಬರಕ್ಕೆ ಶಿರಸಿ ನಗರದಲ್ಲಿ ಪವರ್ ಕಟ್ ಆಗಿದೆ. ಮತಗಟ್ಟೆಯ ಕೊಠಡಿಗಳಲ್ಲಿ ಕತ್ತಲು ಆವರಿಸಿದೆ. ಇದರಿಂದ ಮತದಾರರು ಮತದಾನಕ್ಕೆ ಬರದೇ ಮತದಾನ ಪ್ರಕ್ರಿಯೆ ಮಧ್ಯಾಹ್ನದ ಬಳಿಕ ಇಳಿಮುಖವಾಗಿದೆ.

ಹಳೇ ಭದ್ರವತಿ ಮತ್ತು ಹೊಸಮನೆ ಭಾಗದಲ್ಲಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಗುಡುಗು-ಸಿಡಿಲು ಮತದಾರರನ್ನು ಹೆದರಿಸಿದೆ. ಪರಿಣಾಮ ಮತಕೇಂದ್ರಗಳು ಖಾಲಿ ಖಾಲಿಯಾಗಿವೆ. ಸುಮಾರು ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದೆ. ಇದಲ್ಲದೇ ಮಳೆಯಿಂದಾಗಿ ಮತಗಟ್ಟೆಗಳು ಅಸ್ತವ್ಯಸ್ತವಾಗಿದ್ದು, ಎಲ್ಲೆಡೆ ನೀರು ತುಂಬಿ ಹರಿಯುತ್ತಿದೆ.

ಇನ್ನೂ ಕಾಫಿನಾಡು ಮಲೆನಾಡು ಭಾಗದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದೆ. ಮೂಡಿಗೆರೆಯ ಕಳಸ, ಎನ್.ಆರ್.ಪುರದ ಬಾಳೆಹೊನ್ನೂರು ಸುತ್ತಮುತ್ತ ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ರಣಬಿಸಿಲಿಗೆ ಬೇಸತ್ತಿದ್ದ ಮಲೆನಾಡಿಗರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ರೈತರು, ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

Share This Article
Leave a Comment

Leave a Reply

Your email address will not be published. Required fields are marked *