ಗೋಕರ್ಣಕ್ಕೆ ಅನಿಲ್ ಕುಂಬ್ಳೆ ಭೇಟಿ

Public TV
0 Min Read

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ ಭೇಟಿ ನೀಡಿ ಪೂಜಾ ಕಾರ್ಯ ನೆರವೇರಿಸಿದರು.

ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು. ವೇ.ವಿಶ್ವನಾಥ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು.

ದೇವಸ್ಥಾನದ ಆಡಳಿತಾಧಿಕಾರಿ ಶ್ರೀ ಜಿಕೆ ಹೆಗಡೆ ಆತ್ಮಲಿಂಗ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *