ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಹೋದ ಅಂಬುಲೆನ್ಸಿಗೂ ಅಪಘಾತ

Public TV
1 Min Read

– ಸ್ಥಳೀಯ ಆಟೋಗಳಲ್ಲಿ ಗಾಯಾಳುಗಳ ರವಾನೆ

ಮಂಗಳೂರು: ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಹೋದ ಅಂಬ್ಯುಲೆನ್ಸ್ ಕೂಡ ಅಪಘಾತಕ್ಕಿಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಾರ್ತಿಕಲ್ಲು ಗ್ರಾಮದಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಹಾಗೂ ಧರ್ಮಸ್ಥಳಕ್ಕೆ ಬರುತ್ತಿದ್ದ ಸೆಲೆರಿಯೋ ಕಾರು ಪಾರ್ತಿಕಲ್ಲು ಗ್ರಾಮದಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಎರಡೂ ಕಾರುಗಳು ಜಖಂಗೊಂಡಿದ್ದು, ಯಮುನಾ (40), ಮುತ್ತಪ್ಪ (45), ಮೋಹಿನಿ (42), ಮೋಕ್ಷಿ (17), ಧನ್ಯ(16) ಸೇರಿದಂತೆ ಹಲವರಿಗೆ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳೀಯರು, ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಅಂಬುಲೆನ್ಸ್ ಗೆ ಕರೆ ಕರೆ ಮಾಡಿದ್ದಾರೆ. ಅಪಘಾತ ಸ್ಥಳಕ್ಕೆ ಬರುತ್ತಿದ್ದ ಆಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾನೆ.

ಅಂಬುಲೆನ್ಸ್ ಅವಘಾತಕ್ಕಿಡಾದ ಮಾಹಿತಿ ಸಿಗುತ್ತಿದ್ದಂತೆ ಸ್ಥಳೀಯ ಆಟೋಗಳಲ್ಲಿ ಆಸ್ಪತ್ರೆಗೆ ಗಾಯಾಳುಗಳನ್ನು ಸಾಗಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *