ಕಾಂಗ್ರೆಸ್‍ಗಾಗಿ ಹಗಲು ರಾತ್ರಿ ಶ್ರಮಿಸಿದ ರಾಹುಲ್ ಭಯವಿಲ್ಲದ ನಾಯಕ: ಸೋನಿಯಾ ಗಾಂಧಿ

Public TV
1 Min Read

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷಕ್ಕಾಗಿ ಹಗಲು ರಾತ್ರಿ ಶ್ರಮಿಸದ್ದಾರೆ. ಈ ಮೂಲಕ ಭಯವಿಲ್ಲದ ನಾಯಕತ್ವವನ್ನು ಪ್ರದರ್ಶಿಸಿದ್ದಾರೆ ಎಂದು ಕಾಂಗ್ರೆಸ್‍ನ ಸಂಸದೀಯ ನಾಯಕಿ ಸೋನಿಯಾ ಗಾಂಧಿ ಅವರು ಮೆಚ್ಚುಗೆ ವ್ಯಕ್ತಸಿಪಡಿದ್ದಾರೆ.

ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಆಯ್ಕೆಯಾದ ಸೋನಿಯ ಗಾಂಧಿ ಅವರು, ದೆಹಲಿಯಲ್ಲಿ ನಡೆದ ಪಕ್ಷದ ಸಂಸದರ ಸಭೆಯಲ್ಲಿ ಮಾತನಾಡಿ, ತಮ್ಮ ಮಗ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತೋರಿದ ಭಯವಿಲ್ಲದ ನಾಯಕತ್ವಕ್ಕೆ ಅಭಿನಂದನೆಯನ್ನು ಸಲ್ಲಿಸಿದರು.

ಇಂದು ನಡೆದ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ ತೋರಿದ ಬಲಿಷ್ಠ ಮತ್ತು ಭಯವಿಲ್ಲದ ನಾಯಕತ್ವಕ್ಕಕೆ ಹೃದಯಪೂರ್ವಕ ಧನ್ಯವಾದಗಳು. ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರು ರಾತ್ರಿ ಹಗಲು ಎನ್ನದೇ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಭಯವಿಲ್ಲದ ನಾಯಕತ್ವವನ್ನು ಪ್ರದರ್ಶಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿದ್ದಾರೆ.

ರಾಹುಲ್ ಗಾಂಧಿ ಅವರು ಛತ್ತಿಸ್‍ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವನಗೊಳಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷನಾಗಿ ಭಾರತದ ಎಲ್ಲಾ ಕಡೆಯಲ್ಲೂ ಪಕ್ಷದ ಕಾರ್ಯಕರ್ತರ ಮತ್ತು ಕೋಟಿ ಮತದಾರರ ಗೌರವ ಮತ್ತು ಪ್ರೀತಿಯನ್ನು ಗಳಿಸಿದ್ದಾರೆ ಎಂದು ಸಂತೋಷ ವ್ಯಕ್ತಪಡಿದರು.

ರಾಹುಲ್ ಗಾಂಧಿ ಅವರು ರೈತರು, ಕಾರ್ಮಿಕರು, ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಹಾಗೂ ಯುವಜನತೆ ಮತ್ತು ಮಹಿಳೆಯರಿಗೆ ಆದ ಅನ್ಯಾಯಗಳ ವಿರುದ್ಧ ಹೋರಾಡಿ ಅವರಿಗೆ ಸಮಾಜದಲ್ಲಿ ನ್ಯಾಯ ಕೊಡಿಸಿದ್ದಾರೆ. ಅವರ ನಾಯಕತ್ವ ಅವರ ಪ್ರಾಮಾಣಿಕತೆ, ಶ್ರಮ ಎಲ್ಲಾವುದಕ್ಕೂ ನಾವು ಕೃತಜ್ಞತೆ ಹೇಳುತ್ತೇವೆ ಎಂದು ಹೇಳಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ 44 ಸ್ಥಾನಗಳನ್ನೂ ಗೆದ್ದಿದ್ದೇವು ಮತ್ತು 55 ರಾಜ್ಯಸಭಾ ಸ್ಥಾನಗಳನ್ನೂ ಪಡೆದುಕೊಂಡಿದ್ದವು. ಈ ಬಾರಿ ರಾಹುಲ್ ಅವರ ನಾಯಕತ್ವದಲ್ಲಿ ಸರ್ಕಾರದ ದುಷ್ಪರಿಣಾಮಗಳನ್ನು ಬಹಿರಂಗಪಡಿಸುವಲ್ಲಿ ಕಾಂಗ್ರೆಸ್ ಪಕ್ಷ ಧೈರ್ಯದಿಂದ ಹೋರಾಡಿದೆ. ಈ ಕಾರಣಕ್ಕಾಗಿ ನಾನು ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *