ಮಕ್ಕಳಾಗಿಲ್ಲವೆಂದು ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಕೊಲೆಗೈದ

Public TV
1 Min Read

ಬೀದರ್: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನು ನೇಣು ಬಿಗಿದು ಕೊಲೆ ಮಾಡಿ ಪತಿರಾಯ ಪರಾರಿಯಾದ ಘಟನೆ ಬೀದರ್ ತಾಲೂಕಿನ ಕಾಡವಾಡ ಗ್ರಾಮದಲ್ಲಿ ನಡೆದಿದೆ.

ಕ್ರಿಸ್ತ ಕುಮಾರಿ(28) ವರದಕ್ಷಿಣೆ ಕಿರುಕುಳಕ್ಕೆ ಕೊಲೆಯಾದ ಮಹಿಳೆಯಾಗಿದ್ದು, ಕೊಲೆ ಮಾಡಿ ಪತಿರಾಯ ಇಮನ್ವೆಲ್ ಪರಾರಿಯಾಗಿದ್ದಾನೆ. ಮಕ್ಕಳಾಗದ ಕಾರಣ 5 ವರ್ಷದಿಂದ ಪತಿರಾಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದು ತಡರಾತ್ರಿ ಮತ್ತೆ ವರದಕ್ಷಿಣೆ ಕುರುಕಿಳ ನೀಡಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಮೃತಳ ಸಂಬಂಧಿಕರು

ಈಗಾಗಲೇ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮಹಿಳೆಯ ಮೃತದೇಹ ರವಾನೆ ಮಾಡಲಾಗಿದೆ. ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರ ತನಿಖೆಯಿಂದ ಸತ್ಯಾಸತ್ಯತೆ ಬಹಿರಂಗವಾಗಲಿದೆ.

Share This Article
Leave a Comment

Leave a Reply

Your email address will not be published. Required fields are marked *