ಹಾವೇರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಚೌಡಯ್ಯದಾನಪುರ ಕ್ರಾಸ್ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು 28 ವರ್ಷದ ಜಗದೀಶ ದೀಪಾಲಿ ಮತ್ತು 60 ವರ್ಷದ ಹನುಮಂತಪ್ಪ ದೀಪಾಲಿ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.
ಮೃತರು ಹೊಸರಿತ್ತಿ ಗ್ರಾಮದಿಂದ ರಾಣೇಬೆನ್ನೂರು ನಗರಕ್ಕೆ ಕನ್ಯೆ ನೋಡಲು ಬೈಕ್ ನಲ್ಲಿ ಹೋಗುತ್ತಿದ್ದರು. ಬಸ್ ಹೆಚ್ಚು ವೇಗವಾಗಿ ಸಂಚರಿಸುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ರಾಣೇಬೆನ್ನೂರು ಗ್ರಾಮೀಣ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]