ಭಾರತಕ್ಕೆ ಸೋಲು, ಟಿವಿ ಒಡೆದು ಮಂಡ್ಯ ಯುವಕನಿಂದ ಶಪಥ

Public TV
1 Min Read

ಮಂಡ್ಯ: ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತ ಸೋತಿದ್ದಕ್ಕೆ ಯುವಕನೊಬ್ಬ ಟಿವಿ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಮದ್ದೂರಿನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಬೆಳ್ಳಿ ಹೋಟೆಲ್‍ನಲ್ಲಿ ಈ ಘಟನೆ ನಡೆದಿದ್ದು, ಮದ್ದೂರಿನ ನಿವಾಸಿಯಾದ ಶಂಕರ್ ಉತ್ತಮ ಪ್ರದರ್ಶನ ನೀಡುತ್ತಿದ್ದ ಭಾರತ ಸೆಮಿಫೈನಲ್‍ನಲ್ಲಿ ಸೋತ್ತಿದ್ದಕ್ಕೆ ಆಕ್ರೋಶಗೊಂಡು ಇನ್ನು ಮುಂದೆ ಟಿವಿ ನೋಡುವುದಿಲ್ಲ ಎಂದು ಶಪಥ ಮಾಡಿದ್ದಾನೆ.

ಮಳೆಯಿದ್ದ ಸ್ಥಗಿತಗೊಂಡಿದ್ದ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 18 ರನ್‍ಗಳಿಂದ ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

ಗೆಲ್ಲಲು 240 ರನ್ ಗಳ ಗುರಿಯನ್ನು ಪಡೆದ ಭಾರತ 49.3 ಓವರ್ ಗಳಲ್ಲಿ 221 ರನ್ ಗಳಿಗೆ ಆಲೌಟ್ ಆಗಿ ಸೋಲನ್ನು ಒಪ್ಪಿಕೊಂಡಿತು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‍ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಹತ್ತಿರ ತಂದಿಟ್ಟಿದ್ದರು. ಆದರೆ ಕೊನೆಯ 11 ಎಸೆತಗಳಲ್ಲಿ 12 ಗಳಿಸಿದ ಭಾರತ 4 ವಿಕೆಟ್ ಕಳೆದುಕೊಂಡು ಟೂರ್ನಿಯಿಂದಲೇ ನಿರ್ಗಮಿಸಿದೆ.

Share This Article
Leave a Comment

Leave a Reply

Your email address will not be published. Required fields are marked *