ಬಿಎಸ್‍ವೈ ಸಿಎಂ ಆಗಲಿ ಎಂದು ಮಂಗಳವಾರ ಸ್ವಗ್ರಾಮದಲ್ಲಿ ವಿಶೇಷ ಪೂಜೆ

Public TV
1 Min Read

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎಂದು ಮಂಗಳವಾರ ಅವರ ಸ್ವಗ್ರಾಮದಲ್ಲಿ ವಿಶೇಷ ಪೂಜೆ ನಡೆಯಲಿದೆ.

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೂಕನಕೆರೆ ಗ್ರಾಮ ಮಾಜಿ ಸಿಎಂ ಬಿಎಸ್‍ವೈ ಅವರ ಹುಟ್ಟೂರು ಆಗಿದ್ದು, ಅಲ್ಲಿಯೇ ಹೋಮ, ಹವನ, ವಿಶೇಷ ಪೂಜೆ ನಡೆಯಲಿದೆ. ಗುರುವಾರ ಬೆಳಗ್ಗೆ ಎಂಟರಿಂದ ಬೂಕನಕೆರೆ ಗ್ರಾಮ ದೇವತೆ ಗೋಗಲಮ್ಮ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಗಣಪತಿ ಹೋಮ ನಡೆಯಲಿದೆ.

ಯಡಿಯೂರಪ್ಪ ಅವರು ಮನೆ ದೇವರು ಗವಿಮಠದ ಸ್ವಾತಂತ್ರ ಸಿದ್ಧಲಿಂಗೇಶ್ವರನಿಗೂ ವಿಶೇಷ ಪೂಜೆ ನಡೆಯಲಿದೆ. ಯಡಿಯೂರಪ್ಪ ಸೂಚನೆ ಮೇರೆಗೆ ಅವರ ಸಂಬಂಧಿಗಳ ನೇತೃತ್ವದಲ್ಲಿ ಈ ವಿಶೇಷ ಹೋಮ, ಹವನ ನಡೆಯಲಿದೆ.

ಯಡಿಯೂರಪ್ಪ ಸಂಕಷ್ಟದಲ್ಲಿ ಇದ್ದಾಗ ಹಾಗೂ ಅಧಿಕಾರಕ್ಕೇರುವ ಸಂದರ್ಭದಲ್ಲಿ ಗೋಗಲಮ್ಮನಿಗೆ ಹೋಮ, ಪೂಜೆ ಸಲ್ಲಿಸುವುದು ವಾಡಿಕೆ ಆಗಿದೆ. ದೋಸ್ತಿ ಸರ್ಕಾರ ಪತನವಾಗಿ ಯಡಿಯೂರಪ್ಪ ಮುಖ್ಯಮಂತ್ರಿ ಗಾದಿಗೇರಲು ಈ ಹೋಮ, ಹವನ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *