ವಿಶ್ವಾಸಮತ ಯಾಚನೆಗೆ ವಾಜಪೇಯಿ 10 ದಿನ ತೆಗ್ದುಕೊಂಡಿದ್ದರು- ರೇವಣ್ಣ

Public TV
1 Min Read

ಮೈಸೂರು: ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಮೊರೆ ಹೋದ ಸಚಿವ ಹೆಚ್.ಡಿ ರೇವಣ್ಣ ಸರ್ಕಾರ ಉಳಿಸಲು ಸಿಎಂ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ.

ದೇವಿಯ ದರ್ಶನದ ಬಳಿಕ ಮಾತನಾಡಿದ ರೇವಣ್ಣ, ನೋಡ್ರಿ.. ಇದೇ ಬಿಜೆಪಿಯ ಈ ಹಿಂದಿನ ಪ್ರಧಾನಿ ವಾಜಪೇಯಿ ಅವರು ವಿಶ್ವಾಸ ಮತ ತೋರಿಸಲು ಹತ್ತು ದಿನ ಸಮಯ ತೆಗೆದು ಕೊಂಡಿದ್ದರು. ಹೀಗಾಗಿ ಈ ಎಲ್ಲಾ ವಿಚಾರಗಳ ಬಗ್ಗೆ ಸ್ಪೀಕರ್ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ವಿಶ್ವಾಸ ಮತಕ್ಕಾಗಿಯೇ ಮುಖ್ಯಮಂತ್ರಿ ಅವರು ಜುಲೈ 12ರಂದು ಕೇಳಿದರು. ಅಲ್ಲದೆ 12ರಂದು ಮೀಟಿಂಗ್ ಕೂಡ ಕರೆದಿದ್ದು, ಬಿಜೆಪಿಯವರು ಬಂದಿಲ್ಲ. ಜುಲೈ 18ರಂದು ಮತ್ತೆ ವಿಶ್ವಾಸಮತಕ್ಕೆ ಬಂದೆವು. ಆಗ ಸುಪ್ರೀಂಕೋರ್ಟ್ ಕೆಲವು ಡೈರೆಕ್ಷನ್ ನೀಡಿತ್ತು ಎಂದರು.

ಇಲ್ಲಿ ಯಾರು ಕಾಲ ಹರಣ ಮಾಡುತ್ತಿದ್ದಾರೆ ಎಂದು ಜನ ನೋಡುತ್ತಿದ್ದಾರೆ. ಈ ವಿಚಾರವಾಗಿ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *