ಭಾರೀ ಮಳೆ ಗಾಳಿಗೆ ಮರ ಬಿದ್ದು ಅರಣ್ಯ ರಕ್ಷಕ ಸಾವು

Public TV
1 Min Read

-ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ

ಕಾರವಾರ: ಭಾರೀ ಮಳೆ ಗಾಳಿಗೆ ಮರ ಬಿದ್ದು ಅರಣ್ಯ ರಕ್ಷಕ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ರಸ್ತೆಯ ಕುಳಿಬಿಡು ಬಳಿ ನಡೆದಿದೆ.

ಅರಣ್ಯ ರಕ್ಷಕ ಶಶಿಧರ್ (58) ಮೃತ ದುರ್ದೈವಿ. ಇಂದು ಕರ್ತವ್ಯದ ನಿಮಿತ್ತ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಬೈಕ್ ಮೇಲೆ ಮರ ಬಿದ್ದು ಮರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೃಹದಾಕಾರದ ಮರ ಬಿದ್ದಿದ್ದರಿಂದ ರಸ್ತೆ ಸಂಚಾರ ಬಂದ್ ಆಗಿದ್ದು, ತೆರವು ಕಾರ್ಯ ನಡೆಸಲಾಗುತ್ತಿದೆ. ಈ ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಹೈ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದ ಐದು ತಾಲೂಕುಗಳ ಶಾಲಾ ಕಾಲೇಜಿಗೆ ಇಂದು ರಜೆಯನ್ನು ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ.

ಕರಾವಳಿ ಭಾಗದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ಶುಕ್ರವಾರದಿಂದಲೂ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಸೂಚನೆಯಂತೆ ರಜೆ ಘೋಷಣೆ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *