ಬೆಂಗಳೂರಿನ ಚಂದಾಪುರದಲ್ಲಿ ಹೈವೇ ಜಲಾವೃತ – ಅರ್ಧ ಮುಳುಗಿದ ವಾಹನಗಳು

Public TV
0 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಡಿ ಭಾರೀ ಮಳೆಯಾಗಿದ್ದು, ಬೆಂಗಳೂರು ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 7 ಸಂಪೂರ್ಣ ಜಲಾವೃತವಾಗಿದೆ.

ರಾತ್ರಿಯಿಡೀ ಎಡಬಿಡದೆ ಸುರಿದ ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಹೆದ್ದಾರಿ ಜಲಾವೃತವಾಗಿದ್ದು, ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ಹೆದ್ದಾರಿಯಲ್ಲಿರುವ ರೈಲ್ವೇ ಸೇತುವೆ ಬಳಿ ಅಪಾರ ಪ್ರಮಾಣದ ನೀರು ಸಂಗ್ರಹವಾದ ಹಿನ್ನೆಲೆ ಅರ್ಧ ವಾಹನಗಳು ನೀರಿನಲ್ಲಿ ಮುಳುಗುತ್ತಿವೆ. ಈಗಾಗಲೇ ಮೂರು ವಾಹನಗಳು ನೀರಿನಲ್ಲಿ ಸಿಲುಕಿದ ಕಾರಣ ವಾಹನ ಚಲಾಯಿಸಲು ಚಾಲಕರು ಭಯಪಟ್ಟು ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *