ಯಂತ್ರಕ್ಕೆ ಸಿಲುಕಿ ಕಾರ್ಮಿಕನ ಅರ್ಧ ಕೈ ಕಟ್

Public TV
1 Min Read

ಕೋಲಾರ: ಕೆಲಸ ಮಾಡುವ ವೇಳೆ ಯಂತ್ರಕ್ಕೆ ಸಿಲುಕಿ ಕಾರ್ಮಿಕನ ಕೈ ಅರ್ಧ ತುಂಡಾದ ಘಟನೆ ಕೋಲಾರದ ನತಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ನಹಾರ್ಸ್ ಎಂಜಿನಿಯರಿಂಗ್ ಇಂಡಿಯಾ ಕಂಪನಿಯಲ್ಲಿಂದು ಈ ಘಟನೆ ನಡೆದಿದೆ. ಹೈದರ್ ಎಂಬ ಕಾರ್ಮಿಕನ ಕೈ ತುಂಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.

ಕಾರ್ಖಾನೆಯ ಆಡಳಿತ ಮಂಡಳಿಯಿಂದ ಸೂಕ್ತ ಚಿಕಿತ್ಸೆ ಹಾಗೂ ಭದ್ರತೆ ನೀಡದ ಆರೋಪ ಕೇಳಿಬಂದಿದೆ. ಕಾರ್ಖಾನೆ ಎದುರು ನೂರಾರು ಕಾರ್ಮಿಕರು ಭದ್ರತೆ ಹಾಗೂ ರಕ್ಷಣೆ ನೀಡುವಂತೆ ಪ್ರತಿಭಟನೆ ನಡೆಸಿದರು. ಗಾಯಾಳುಗೆ ಸೂಕ್ತ ಪರಿಹಾರ ನೀಡುವಂತೆ, ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‍ಐ ನೀಡುವಂತೆ ಆಗ್ರಹ ಮಾಡಿದರು.

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *