ಸಿದ್ದರಾಮಯ್ಯ ಪಾಲಿಗೆ ನಿರ್ಣಾಯಕವಾದ ಬೈ ಎಲೆಕ್ಷನ್

Public TV
1 Min Read

ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣಾ ಕಣ ಮಾಜಿ ಸಿಎಂ ಸಿದ್ದರಾಮಯ್ಯ ಪಾಲಿಗೆ ನಿರ್ಣಾಯಕವಾಗಿದೆ. ಸಮ್ಮಿಶ್ರ ಸರ್ಕಾರ ಕೆಡವಿದ ಆರೋಪಕ್ಕೆ ಸಿಲುಕಿದ ಸಿದ್ದರಾಮಯ್ಯ ಪಾಲಿಗೆ ಈ ಉಪಚುನಾವಣೆಯೇ ಎಲ್ಲವನ್ನೂ ನಿರ್ಧಾರ ಮಾಡಲಿದೆ.

ಸದ್ಯಕ್ಕೆ ಕಾಂಗ್ರೆಸ್ ಸೇನೆಯನ್ನ ಮುನ್ನಡೆಸುವ ಜವಾಬ್ದಾರಿ ಸಿದ್ದರಾಮಯ್ಯರದ್ದಾಗಿದೆ. ಉಪ ಚುನಾವಣೆಯಲ್ಲಿ ಹತ್ತಕ್ಕೂ ಹೆಚ್ಚು ಸ್ಥಾನ ಕಾಂಗ್ರೆಸ್ ಪರವಾಗಿ ಗೆಲ್ಲಿಸಿಕೊಂಡರೆ ಸಿದ್ದರಾಮಯ್ಯನೇ ಕಿಂಗ್ ಆಗಲಿದ್ದಾರೆ. ಅಷ್ಟೊಂದು ಸ್ಥಾನ ಗೆದ್ದರೆ ರಾಜ್ಯ ರಾಜಕಾರಣದಲ್ಲಿ ಆಗುವ ಬದಲಾವಣೆ ಸಿದ್ದರಾಮಯ್ಯ ಪಾಲಿಗೆ ನಿರ್ಣಾಯಕ ಆಗುವ ಸಾಧ್ಯತೆಯೇ ಹೆಚ್ಚಿದೆ. ಎಲ್ಲಕ್ಕಿಂತ ಮುಖ್ಯವಾಗಿ ಪಕ್ಷಾಂತರ ಮಾಡಿ ತಮ್ಮ ಹೆಸರಿಗೆ ಕಪ್ಪು ಚುಕ್ಕೆ ತಂದ ಮಾಜಿ ಶಿಷ್ಯರ ಕ್ಷೇತ್ರವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಮಾಜಿ ಸಿಎಂಗೆ ಎದುರಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ತಮ್ಮದೇ ಸಮುದಾಯದ ಮೂವರು ಶಾಸಕರು ಗೆದ್ದಿದ್ದ ರಾಣೇಬೆನ್ನೂರು, ಹೊಸಕೋಟೆ ಹಾಗೂ ಕೆ.ಆರ್.ಪುರಂ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರನ್ನ ಗೆಲ್ಲಿಸಿಕೊಂಡರೆ ಸಿದ್ದರಾಮಯ್ಯ ಒಂದು ಹಂತಕ್ಕೆ ಸೇಫ್ ಆಗಲಿದ್ದಾರೆ. ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಹುಣಸೂರಿನಂತ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ರೆ ಕಾಂಗ್ರೆಸ್ ಪಾಳಯದಲ್ಲಿ ಸಿದ್ದರಾಮಯ್ಯ ಕೈ ಮೇಲಾಗಲಿದೆ.

ಕಾಂಗ್ರೆಸ್ ಅಭ್ಯರ್ಥಿಗಳನ್ನ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡರೆ ಹೈ ಕಮಾಂಡ್ ಕೂಡ ಸಿದ್ದರಾಮಯ್ಯ ವಿಷಯದಲ್ಲಿ ಸಾಫ್ಟ್ ಆಗಲಿದೆ. ಹೀಗೆ ತಮ್ಮ ವಿರುದ್ಧ ಕೇಳಿ ಬಂದ ಸಮ್ಮಿಶ್ರ ಸರ್ಕಾರ ಕೆಡವಿದ ಆರೋಪದಿಂದ ಮುಕ್ತರಾಗಿ ಹಳೆ ಇಮೇಜ್ ಗೆ ಬರಬೇಕಾದರೆ ಉಪ ಚುನಾವಣೆ ಗೆಲುವು ಸಿದ್ದರಾಮಯ್ಯಗೆ ಅನಿವಾರ್ಯವಾಗಿದೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *