ಕುಸಿದ ಮನೆಯ ಮೇಲ್ಛಾವಣಿ – ವೃದ್ಧ ದಂಪತಿ ಸೇರಿ ಮೂವರ ದುರ್ಮರಣ

Public TV
1 Min Read

ಬೆಂಗಳೂರು: ಬಾಗಲಕೋಟೆ ದಾವಣಗೆರೆ ಹಾಗೂ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವಡೆ ಮಳೆಯಾಗಿದ್ದು, ಕೆಲವೆಡೆ ಹಾನಿಯುಂಟಾಗಿದೆ.

ನಿರಂತರವಾಗಿ ಸುರಿದ ಮಳೆಗೆ ನೆನೆದು ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಮಗ ಸೇರಿ ವೃದ್ಧ ದಂಪತಿ ದಾರುಣವಾಗಿ ಮೃತಪಟ್ಟ ಘಟನೆ ಬಾಗಲಕೋಟೆ ತಾಲೂಕಿನ ಕಿರಸೂರು ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಈರಪ್ಪ ಹಡಪದ (60), ಗೌರವ್ವ ಹಡಪದ(52) ಹಾಗೂ ಮಗ ಮಗ ನಿಂಗಪ್ಪ ಹಡಪದ(35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಿಂಗಪ್ಪನ ಪತ್ನಿ ಸವಿತಾ ಹಾಗೂ ಮಗಳು ತನು ಅಪಾಯದಿಂದ ಪಾರಾಗಿದ್ದಾರೆ.

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮನೆ ಕುಸಿದು ಈ ದುರ್ಘಟನೆ ಸಂಭವಿಸಿದ್ದು, ಕುಟುಂಬದ ರೋಧನ ಮುಗಿಲು ಮುಟ್ಟಿದೆ. ಶವಗಳು ಮನೆಯ ಅವಶೇಷಗಳಡಿ ಸಿಲುಕಿದ ಪರಿಣಾಮ ಅಗ್ನಿಶಾಮಕ ದಳ ಹಾಗೂ ಬಾಗಲಕೋಟೆ ಗ್ರಾಮೀಣ ಪೊಲೀಸರು ಹಾಗೂ ಸ್ಥಳೀಯರ ಸಹಾಯದಿಂದ ಶವಗಳ ಶೋಧಕಾರ್ಯ ಮುಂದುವರಿದಿದೆ.

ದಾವಣಗೆರೆಯಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ಮೊಣಕಾಲು ಉದ್ದ ನೀರು ನಿಂತಿದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ರಸ್ತೆ ಕಾಣದೆ ಪರದಾಡಿದಾಡಿದ್ದಾರೆ. ಸತತ 1 ಗಂಟೆ ಕಾಲ ಸುರಿದ ಮಳೆಗೆ ತರಕಾರಿ ಮಾರುಕಟ್ಟೆಯಲ್ಲಿ ನೀರು ನಿಂತ ಪರಿಣಾಮ ರೈತರ ಪರದಾಟ ಅನುಭವಿಸಿದ್ದಾರೆ. ದಾವಣಗೆರೆ, ಜಗಳೂರು ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗಿದೆ.

ಮಲೆನಾಡಿನ ಹಲವೆಡೆ ಭಾರೀ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಹೊಕ್ಕಳ್ಳಿಕೊಪ್ಪದಲ್ಲಿ ಸೇತುವೆ ಕೊಚ್ಚಿಹೋಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. 2 ತಿಂಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಸೇತುವೆ ಕೊಚ್ಚಿಹೋಗಿದ್ದ ಪರಿಣಾಮ ಹೊರನಾಡು-ಹೊಕ್ಕಳ್ಳಿ-ಕೊಪ್ಪಕ್ಕೆ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ ಸೇತುವೆ ಭಾಗದಲ್ಲಿ ಚಲಿಸುತ್ತಿದ್ದ ಬೈಕ್ ಸವಾರ ಕೂಡ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡ ಮಂದಿ ಹೈರಾಣಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *