ಕಾರು ನಿಲ್ಲಿಸದೆ ಬಸವರಾಜ್ ಬೊಮ್ಮಾಯಿ ಉದ್ಧಟತನ

Public TV
1 Min Read

ಮಂಡ್ಯ: ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದು, ಚುನಾವಣಾ ಸಿಬ್ಬಂದಿಗೂ ಕ್ಯಾರೆ ಎನ್ನದೇ ಮುಂದೆ ಸಾಗಿದ್ದಾರೆ.

ಬಸವರಾಜ್ ಬೊಮ್ಮಾಯಿ ಕಾರಿನಲ್ಲಿ ಹೋಗುತ್ತಿದ್ದಾಗ ವಾಹನ ತಪಾಸಣೆಗೆಂದು ಚುನಾವಣಾ ಸಿಬ್ಬಂದಿ ಕಾರನ್ನು ತಡೆಯಲು ಮುಂದಾದರು. ಆದರೆ ಬೊಮ್ಮಾಯಿ ವಾಹನ ತಪಾಸಣೆಗೆ ಸಹಕರಿಸದೆ ಚುನಾವಣಾ ಸಿಬ್ಬಂದಿಗೂ ಕ್ಯಾರೆ ಎನ್ನದೇ ಮುಂದೆ ಸಾಗಿದ್ದಾರೆ.

ಈಗಾಗಲೇ ಗೃಹ ಮಂತ್ರಿ ಎರಡು ಕಡೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಬುಧವಾರ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಅವರು ಮಂಡ್ಯ ಜಿಲ್ಲೆಯ ಗಡಿ ನಿಡಘಟ್ಟ ಹಾಗೂ ಮಂಡ್ಯ ತಾಲೂಕಿನ ಹನಕೆರೆ ಬಳಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಬುಧವಾರ ಎರಡು ಕಡೆ ಚೆಕ್ ಪೋಸ್ಟ್ ಸಿಬ್ಬಂದಿ ಬೆಂಗಳೂರಿಂದ ಮೈಸೂರಿನತ್ತ ತೆರಳುತ್ತಿದ್ದ ಬಸವರಾಜ್ ಅವರ ವಾಹವನ್ನು ತಡೆದಿದ್ದರು. ಮೊದಲು ನಿಡಘಟ್ಟ ಬಳಿ ವಾಹನ ನಿಲ್ಲಿಸದ ಹಿನ್ನೆಲೆಯಲ್ಲಿ ಹನಕೆರೆ ಬಳಿ ವಾಹನ ತಪಾಸಣೆಗೆ ಚೆಕ್ ಪೋಸ್ಟ್ ಸಿಬ್ಬಂದಿ ಸಿದ್ಧವಾಗಿದ್ದರು. ಇಲ್ಲೂ ವಾಹನ ನಿಲ್ಲಿಸದೆ ಸಚಿವರ ಉದ್ಧಟತನ ಪ್ರದರ್ಶಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *