ಪೆಟ್ರೋಲ್ ಹಣ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಪುಂಡರ ಹಲ್ಲೆ

Public TV
1 Min Read

ಬೀದರ್: ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡುವ ವಿಚಾರಕ್ಕೆ ಕೆಲ ಪುಂಡರು ಬಂಕ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಭಾಲ್ಕಿ ಪಟ್ಟಣದ ಭಾರತ್ ಪೆಟ್ರೋಲಿಯಂ ಬಂಕ್ ನಲ್ಲಿ ತಡರಾತ್ರಿ ನಡೆದಿದೆ.

ತಡರಾತ್ರಿ ನಾಲ್ವರ ತಂಡವೊಂದು ಭಾಲ್ಕಿಯಲ್ಲಿನ ಭಾರತ್ ಪೆಟ್ರೋಲಿಯಂ ಬಂಕ್‍ಗೆ ಬಂದು ಪೆಟ್ರೋಲ್ ಹಾಕಿಸಿಕೊಂಡಿದ್ದಾರೆ. ಬಳಿಕ ಸಿಬ್ಬಂದಿ ಹಣ ಕೇಳಿದಾಗ ಪುಂಡರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಬಂಕ್ ಸಿಬ್ಬಂದಿ ಹಣ ಕೊಡಿ ಎಂದಾಗ ನಮ್ಮ ಬಳಿ ಹಣ ಇಲ್ಲ. ಸ್ವೈಪಿಂಗ್ ಮಿಷನ್ ಇದ್ರೆ ಹೇಳಿ ಅದರಲ್ಲಿ ಹಾಕುತ್ತೇವೆ ಎಂದಿದ್ದಾರೆ. ಆಗ ಬಂಕ್ ಸಿಬ್ಬಂದಿ ನಮ್ಮಲ್ಲಿ ಸ್ವೈಪಿಂಗ್ ಮಿಷನ್ ಇಲ್ಲಾ ಹಣ ಕೊಡಿ ಎಂದಿದ್ದಾರೆ. ಈ ವೇಳೆ ಪುಂಡರು ಹಾಗೂ ಸಿಬ್ಬಂದಿಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಬಂಕ್ ಸಿಬ್ಬಂದಿಯ ಮೇಲೆ ಪುಂಡರು ಗಂಭೀರವಾಗಿ ಹಲ್ಲೆ ಮಾಡಿದ್ದು ಸಿಬ್ಬಂದಿಗೆ ತೀವ್ರವಾದ ಗಾಯಗಳಗಿವೆ. ಸದ್ಯ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿದ್ದು, ವಿಡಿಯೋ ಆಧಾರದ ಮೇಲೆ ನಗರದ ಪೊಲೀಸರು ತನಿಖೆ ನಡೆಸಿ ವಿಜಯಕುಮಾರ್, ದಿಲೀಪ್ ಹಾಗೂ ಮೇಘರಾಜ್ ಮೂವರು ಆರೋಪಿಗಳನ್ನು ಗುರುತಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *