ತಲಕಾಡು ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Public TV
0 Min Read

ಮೈಸೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಬಳಿಯ ನಿಸರ್ಗಧಾಮದಲ್ಲಿ ನಡೆದಿದೆ.

ಬೆಂಗಳೂರಿನ ಹೆಬ್ಬಾಳದ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ಕಾಲೇಜಿನ ಪ್ರಥಮ ಪಿಯುಸಿಯ 45 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ನಿಸರ್ಗಧಾಮಕ್ಕೆ ಬಂದಿದ್ದರು. ಈ ವೇಳೆ ನಿಸರ್ಗ ಧಾಮದ ಬಳಿ ಇರುವ ನದಿಯಲ್ಲಿ ಈಜಾಡಲು ಐವರು ವಿದ್ಯಾರ್ಥಿಗಳು ತೆರಳಿದ್ದಾಗ, ಅವರಲ್ಲಿ ಅಲ್ಫ್ರೆಡ್ ವಿಜಯ್(16) ಹಾಗೂ ಹೇಮಂತ್(17) ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನೀರಿನಲ್ಲಿ ಮುಳುಗುತ್ತಿದ್ದ ಇನ್ನೂ ಮೂವರು ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ತಲಕಾಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *