ಧರ್ಮಸ್ಥಳ ಪ್ರವಾಸ ಮುಗಿಸಿ ಗ್ರಾಮಕ್ಕೆ ಮರಳುತ್ತಿದ್ದವರು ಮಸಣಕ್ಕೆ

Public TV
1 Min Read

– ಶಿರಾಡಿ ಘಾಟ್‍ನಲ್ಲಿ ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ
– ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

ಮಂಗಳೂರು: ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿಯಾಗಿ ಮೂವರು ಮೃತಪಟ್ಟ ಭಾರೀ ಅನಾಹುತ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಬಳಿಯ ಶಿರಾಡಿ ಗ್ರಾಮದ ಪರ್ವರಕೊಟ್ಯ ಬಳಿ ನಡೆದಿದೆ.

ಮಂಡ್ಯ ಮೂಲದ ನಾರಾಯಣ (65), ನೀತು(35), ನಿಧಿ(15) ಮೃತ ದುರ್ದೈವಿಗಳು. ಮಂಗಳೂರಿನಿಂದ ಮಂಡ್ಯದ ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.

ಮಂಡ್ಯ ಜಿಲ್ಲೆಯ ನಾರಾಯಣ ಸೇರಿದಂತೆ ಐವರು ಬ್ರೀಝಾ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗಿದ್ದರು. ಮಂಜುನಾಥನ ದರ್ಶನ ಪಡೆದು ಶುಕ್ರವಾರ ಪ್ರವಾಸ ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದರು. ಈ ವೇಳೆ ಬ್ರೀಝಾ ಕಾರು ಶಿರಾಡಿ ಗ್ರಾಮದ ಪರ್ವರಕೊಟ್ಯ ಸಮೀಪ ಇರುವಂತೆ ಇದೇ ಮಾರ್ಗವಾಗಿ ತೆರಳುತ್ತಿದ್ದ ಕಂಟೇನರ್ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಸಮೀಪದ ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತರ ಹಾಗೂ ಗಾಯಾಳುಗಳ ಸಂಬಂಧಿಕರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *