ರೋಗಿಯ ಬಳಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದ ಸರ್ಕಾರಿ ವೈದ್ಯ

Public TV
1 Min Read

ರಾಮನಗರ: ಸರ್ಕಾರಿ ವೈದ್ಯರೊಬ್ಬರು ರೋಗಿಯ ಬಳಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದ ಘಟನೆ ರಾಮನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ರಾಮನಗರ ಸರ್ಕಾರಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಾರಾಯಣಸ್ವಾಮಿ ಎಸಿಬಿ ಬಲೆಗೆ ಬಿದ್ದ ವೈದ್ಯ. ನಾರಾಯಣಸ್ವಾಮಿ ಅವರು ರೋಗಿಯನ್ನು ಡಿಸ್ಚಾರ್ಜ್ ಮಾಡಲು ಮೂರು ಸಾವಿರ ರೂಪಾಯಿಗೆ ಭೇಟಿಕೆ ಇಟ್ಟಿದ್ದ. ಹೀಗಾಗಿ ರೋಗಿಯ ಸಂಬಂಧಿಕರಿಂದ ಮಂಗಳವಾರ ಜಿಲ್ಲಾಸ್ಪತ್ರೆಯಲ್ಲಿಯೇ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಸರ್ಕಾರಿ ಜಿಲ್ಲಾಸ್ಪತ್ರೆಗೆ ಅಪೆಂಡಿಕ್ಸ್ ಹಿನ್ನೆಲೆಯಲ್ಲಿ ರೋಗಿಯೊಬ್ಬರು ದಾಖಲಾಗಿದ್ದರು. ರೋಗಿಗೆ ಶಸ್ತ್ರಚಿಕಿತ್ಸೆ ಒಳಗಾಗಬೇಕು ಎಂದು ಡಾ.ನಾರಾಯಣಸ್ವಾಮಿ ತಿಳಿಸಿದ್ದಲ್ಲದೇ, ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದರೆ ಸಾವಿರಾರು ರೂಪಾಯಿಗಳು ಖರ್ಚಾಗುತ್ತೆ. ಹೀಗಾಗಿ ನಾನು ಮಾಡಿರುವ ಶಸ್ತ್ರಚಿಕಿತ್ಸೆಗೆ 10 ಸಾವಿರ ರೂಪಾಯಿ ನೀಡಬೇಕು ಎಂದು ಡಿಮ್ಯಾಂಡ್ ಮಾಡಿದ್ದರು.

ಎಸಿಬಿ ಬಲೆಗೆ ಬಿದ್ದಿರುವ ವೈದ್ಯ ನಾರಾಯಣಸ್ವಾಮಿ ಅವರು ಏಳು ಸಾವಿರ ರೂಪಾಯಿಗಳನ್ನು ಮುಂಗಡವಾಗಿ ಪಡೆದುಕೊಂಡು ಶಸ್ತ್ರಚಿಕಿತ್ಸೆ ಮಾಡಿದ್ದರು. ಉಳಿದ 3,000 ರೂ.ಯನ್ನು ಶಸ್ತ್ರಚಿಕಿತ್ಸೆ ವೇಳೆ ಒದಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರೋಗಿಯನ್ನು ಡಿಸ್ಚಾರ್ಜ್ ಮಾಡುವುದನ್ನು ತಡೆದಿದ್ದರು. ಅಷ್ಟೇ ಅಲ್ಲದೆ ಹಣ ನೀಡಿಯೇ ರೋಗಿಯನ್ನು ಕರೆದುಕೊಂಡು ಹೋಗುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಇಂದು ರೋಗಿಯನ್ನ ಡಿಸ್ಚಾರ್ಜ್ ಮಾಡುವಾಗ ಹಣವನ್ನ ಪಡೆಯುತ್ತಿದ್ದ ವೈದ್ಯ ನಾರಾಯಣಸ್ವಾಮಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *