ರೈತ ನಾಯಕ ಲಕ್ಷ್ಮಣ ಸವದಿಗೆ ಮತ ಹಾಕಿದ್ದೇನೆ – ಜೆಡಿಎಸ್‍ಗೆ ಸೆಡ್ಡು ಹೊಡೆದ ಜಿಟಿಡಿ

Public TV
1 Min Read

ಬೆಂಗಳೂರು: ರೈತ ನಾಯಕ ಲಕ್ಷ್ಮಣ ಸವದಿಗೆ ಮತ ಹಾಕಿದ್ದೇನೆ ಎಂದು ಬಹಿರಂಗವಾಗಿ ಹೇಳುವ ಮೂಲಕ ಶಾಸಕ ಜಿಟಿ ದೇವೇಗೌಡ ಜೆಡಿಎಸ್ ಪಕ್ಷಕ್ಕೆ ಸೆಡ್ಡು ಹೊಡೆದಿದ್ದಾರೆ.

ಸಮ್ಮಿಶ್ರ ಸರ್ಕಾರ ಬಿದ್ದಾಗಿನಿಂದ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಇವತ್ತು ಕುಮಾರಸ್ವಾಮಿ ಮತ್ತು ಪಕ್ಷಕ್ಕೆ ಸೆಡ್ಡು ಹೊಡೆದು ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿಗೆ ಮತ ಹಾಕಿದ್ದಾರೆ. ಮತ ಹಾಕಿದ ಬಳಿಕ ಸಿಎಂ ಭೇಟಿ ಮಾಡಿ, ಮತ ಹಾಕಿರುವ ಬಗ್ಗೆ ಖಚಿತ ಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಯಾವುದೇ ಸೂಚನೆ ಬಂದಿರಲಿಲ್ಲ. ಬೆಳಗ್ಗೆ ವಿಧಾನಸೌಧಕ್ಕೆ ಬಂದಾಗ ಚುನಾವಣೆ ನಡೆಯುತ್ತಿತ್ತು. ಶಾಸಕನಾಗಿ ಚುನಾವಣೆಯಲ್ಲಿ ಮತದಾನದ ಮಾಡದಿರುವುದು ತಪ್ಪು. ಹೀಗಾಗಿ ರೈತ ಸಹಕಾರಿ ನಾಯಕ, ಡಿಸಿಎಂ ಲಕ್ಷ್ಮಣ ಸವದಿಗೆ ಮತ ಹಾಕಿದ್ದೇನೆ. ಪಕ್ಷೇತರ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಲಕ್ಷ್ಮಣ ಸವದಿಗೆ ಮತ ಹಾಕಿದ್ದೇನೆ ಎಂದು ಜಿಟಿಡಿ ಬಹಿರಂಗವಾಗಿಯೇ ಹೇಳಿಕೆ ನೀಡಿ ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆಯುವ ಕೆಲಸ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *