ಜಮ್ಮು-ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಸೆದೆಬಡಿದ ಸೇನೆ

Public TV
1 Min Read

ಶ್ರೀನಗರ: ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಕಳೆದ ವರ್ಷ ಫೆಬ್ರವರಿ 14ರಂದು 40 ಯೋಧರನ್ನು ಬಲಿ ತೆಗೆದುಕೊಂಡಿದ್ದ ಪುಲ್ವಾಮಾ ಜಿಲ್ಲೆಯಲ್ಲಿಯೇ ಮೂವರು ಉಗ್ರರನ್ನು ಭಾರತೀಯ ಸೇನೆ ಎನ್‍ಕೌಂಟರ್ ಮಾಡಿದೆ.

ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಇಂದು ನಸುಕಿನ ಜಾವ ಈ ಎನ್‍ಕೌಂಟರ್ ನಡೆದಿದೆ. ಭಾರತೀಯ ಸೇನಾಪಡೆ, ಸಿಆರ್‌ಪಿಎಫ್‌ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜೊತೆಗೂಡಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳವಾರ ಟ್ರಾಲ್ ಪ್ರದೇಶದಲ್ಲಿ ಉಗ್ರರು ಅಡುಗಿ ಕುಳಿತಿರುವ ಬಗ್ಗೆ ಸೇನೆಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆ ಭಾರತೀಯ ಸೇನಾಪಡೆ, ಸಿಆರ್‌ಪಿಎಫ್‌ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜೊತೆಗೂಡಿ ಮಂಗಳವಾರ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದರು.

ಈ ಮೂವರು ಉಗ್ರರು ‘ಅನ್ಸರ್ ಘಾಜ್ವಾ ಉಲ್ ಹಿಂದ್’ ಭಯೋತ್ಪಾದಕ ಸಂಘಟನೆಗೆ ಸೇರಿದವರಾಗಿದ್ದು, ಉಗ್ರರನ್ನು ಜಂಗೀರ್ ರಫೀಖ್ ವಾನಿ, ರಾಜಾ ಉಮರ್ ಮಖ್ಬೂಲ್ ಭಟ್ ಮತ್ತು ಉಜೈರ್ ಅಮಿನ್ ಭಟ್ ಎಂದು ಗುರುತಿಸಲಾಗಿದೆ ಅಂತ ಭಾರತೀಯ ಸೇನೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *