ಗುಡ್ ನ್ಯೂಸ್- ಮಹದಾಯಿ ಅಧಿಸೂಚನೆಗೆ ಸುಪ್ರೀಂಕೋರ್ಟ್ ಸೂಚನೆ

Public TV
2 Min Read

ನವದೆಹಲಿ: ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆ ಈಡೇರಿಕೆ ಸನ್ನಿಹಿತವಾಗಿದೆ. ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಹದಾಯಿ ನ್ಯಾಯಾಧಿಕರಣ ನೀಡಿದ ಐ ತೀರ್ಪುನ ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

ಮಹದಾಯಿ ನ್ಯಾಯಾಧಿಕರಣ ನೀಡಿದ ಐ ತೀರ್ಪು ಪ್ರಶ್ನಿಸಿ ಕರ್ನಾಟಕ ಗೋವಾ ಮಹಾರಾಷ್ಟ್ರ ಸಲ್ಲಿಸಿದ ಅರ್ಜಿಯನ್ನು ಇಂದು ನ್ಯಾ.ಡಿ.ವೈ ಚಂದ್ರಚೂಡ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ಆರಂಭದಲ್ಲಿ ಕರ್ನಾಟಕ ಪರ ವಾದ ಮಂಡಿಸಿದ ಅಡ್ವಕೇಟ್ ಜನರಲ್ ಪ್ರಭು ಲಿಂಗ ನಾವಡಗಿ ಸುಪ್ರೀಂಕೋರ್ಟ್ ಸುದೀರ್ಘ ವಿಚಾರಣೆಗೂ ಮುನ್ನ ನ್ಯಾಯಾಧಿಕರಣ ನೀಡಿದ ತೀರ್ಪಿಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು. ಅಂತಿಮ ಆದೇಶಕ್ಕೆ ಒಳಪಟ್ಟು ಹಂಚಿಕೆಯಾದ ನೀರಿನ ಬಳಕೆಗೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ನ್ಯಾ.ಡಿ.ವೈ ಚಂದ್ರಚೂಡ್ ಗೋವಾ ಮತ್ತು ಮಹಾರಾಷ್ಟ್ರದ ಅಭಿಪ್ರಾಯ ಕೇಳಿದರು. ಎರಡು ರಾಜ್ಯಗಳು ವಿರೋಧ ವ್ಯಕ್ತಪಡಿಸದ ಹಿನ್ನೆಲೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಅಂತಿಮ ಆದೇಶಕ್ಕೆ ಒಳಪಡುವಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಲು ನಿರ್ದೇಶನ ನೀಡಿತು. ಹೆಚ್ಚುವರಿ ನೀರಿನ ಬೇಡಿಕೆಗೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಬೇಸಿಗೆ ರಜೆ ಕಳೆದ ಬಳಿಕ ಜುಲೈ 15-16 ರಂದು ವಿಚಾರಣೆ ನಡೆಸಲಿದ್ದೇವೆ ಎಂದು ಕೋರ್ಟ್ ಸೂಚಿಸಿತು.

ಮಹದಾಯಿ ಐ ತೀರ್ಪಿನಲ್ಲಿ ಏನಿದೆ?
* ಕರ್ನಾಟಕದ ಪಾಲಿಗೆ ಮಹದಾಯಿ ನದಿಯಿಂದ 13.5 ಟಿಎಂಸಿ ನೀರು ಹಂಚಿಕೆ
* ಮಹದಾಯಿಯಿಂದ ಮಲಪ್ರಭೆಗೆ 4 ಟಿಎಂಸಿ ನೀರು ಹರಿಸಲು ಒಪ್ಪಿಗೆ
* ಕುಡಿಯುವ ನೀರಿನ ಬಳಕೆಗಾಗಿ 4 ಟಿಎಂಸಿ ಎಂದ ನ್ಯಾಯಾಧಿಕರಣ
* ಮಹದಾಯಿ ನದಿಯಿಂದ ಕರ್ನಾಟಕಕ್ಕೆ 12 ಟಿಎಂಸಿ ನೀರು ಹಂಚಿಕೆ
* ಬಂಡೂರ ಯೋಜನೆಗೆ ಒಟ್ಟು 2.18 ಟಿಎಂಸಿ ನೀರು ಹಂಚಿಕೆ
* ಕಳಸಾ ಯೋಜನೆಗೆ ಒಟ್ಟು 1.72 ಟಿಎಂಸಿ ನೀರು ಹಂಚಿದ ಟ್ರಿಬ್ಯುನಲ್
* ಜಲ ವಿದ್ಯುತ್ ಯೋಜನೆಗೆ ಒಟ್ಟು 8.02 ಟಿಎಂಸಿ ನೀರು
* ಕಳಸಾ ಯೋಜನೆಗೆ ಒಟ್ಟು 1.72 ಟಿಎಂಸಿ ನೀರು ಹಂಚಿದ ಟ್ರಿಬ್ಯುನಲ್
* ಜಲ ವಿದ್ಯುತ್ ಯೋಜನೆಗೆ ಒಟ್ಟು 8.02 ಟಿಎಂಸಿ ನೀರು
* ಮಹದಾಯಿ ನದಿ ಕಣಿವೆಯಲ್ಲಿ ಬಳಸಲು 1.5 ಟಿಎಂಸಿ ನೀರು ಹಂಚಿಕೆ ನ್ಯಾಯಾಧಿಕರಣ ಮಾಡಿತ್ತು

ಗೆಜೆಟ್ ನೋಟಿಫಿಕೇಷನ್ ನಿಂದ ಏನು ಲಾಭ:
* ಸುಪ್ರೀಂಕೋರ್ಟ್ ನಿರ್ದೇಶನ ಮೇರೆಗೆ ಜಲ ಆಯೋಗದಿಂದ ನೋಟಿಫಿಕೇಷನ್
* ಅಧಿಸೂಚನೆಯಿಂದ ರಾಜ್ಯಕ್ಕೆ ಹಂಚಿಕೆಯಾದ ನೀರು ಯಾವುದೇ ವಿರೋಧವಿಲ್ಲದೇ ಬಳಕೆ ಮಾಡಿಕೊಳ್ಳಬಹುದು
* ಇದಕ್ಕೂ ಮೊದಲ ನೀರಿನ ಬಳಕೆಗೆ ಯೋಜನೆಗಳನ್ನು ರೂಪಿಸಬಹುದು
* ನೋಟಿಪಿಕೇಷನ್ ನಿಂದ ಕೇಂದ್ರ ಸರ್ಕಾರದಿಂದ ರಾಜ್ಯದ ಯೋಜನೆಗಳಿಗೆ ಶೀಘ್ರ ಒಪ್ಪಿಗೆ ಸಿಗಲಿದೆ

Share This Article
Leave a Comment

Leave a Reply

Your email address will not be published. Required fields are marked *