ಸಚಿವ ಪ್ರಭು ಚವ್ಹಾಣ್ ಕಾರು ಅಪಘಾತ

Public TV
1 Min Read

ಬೀದರ್: ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಶಾಸಕರ ಗನ್ ಮ್ಯಾನ್ ಹಾಗೂ ವಾಹನ ಚಾಲಕ ಗಾಯಗೊಂಡಿದ್ದಾರೆ.

ತೆಲಂಗಾಣದ ಜಹಿರಾಬಾದಿನ ಬಳಿ ಇಂದು ಪ್ರಭು ಚವ್ಹಾಣ್ ಅವರ ಕಾರು ಅಪಘಾತಕ್ಕೀಡಾಗಿದೆ. ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನೆಲೆ ಅವರಿಗೆ ಶುಭಕೋರಲು ಪ್ರಭು ಚವ್ಹಾಣ್ ಬೆಂಗಳೂರಿನತ್ತ ತೆರಳುತ್ತಿದ್ದರು. ಸಚಿವರು ಸರ್ಕಾರಿ ವಾಹನ ಇನೋವಾದಲ್ಲಿ ಪ್ರಯಾಣಿಸುತ್ತಿದ್ದರು.

ಸಚಿವರು ತೆರೆಳುತ್ತಿದ್ದ ಕಾರನ್ನು ಅವರ ಗನ್ ಮ್ಯಾನ್ ಫಾರ್ಚುನರ್ ಕಾರಿನಲ್ಲಿ ಹಿಂಬಾಲಿಸುತ್ತಿದ್ದರು. ಈ ವೇಳೆ ಎದುರಿಗೆ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಫಾರ್ಚುನರ್ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಗನ್ ಮ್ಯಾನ್ ರವಿ ಹಾಗೂ ಚಾಲಕ ಸಂಜುಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘಟನೆ ಸಂಬಂಧ ತೆಲಂಗಾಣದ ಜಹೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *