ಸುಳ್ಯದಲ್ಲಿ ಆಗಬೇಕಾದ ಮದ್ವೆ ಮಡಿಕೇರಿಗೆ ಶಿಫ್ಟ್ – ವಧು, ವರ ಸೇರಿ 7 ಜನರು ಮಾತ್ರ ಭಾಗಿ

Public TV
1 Min Read

ಮಡಿಕೇರಿ: ಕೊರೊನಾ ವೈರಸ್ ಕೇವಲ ಜನರ ಆರೋಗ್ಯ ಮತ್ತು ಜನಜೀವನದ ಮೇಲೆ ಮಾತ್ರವಲ್ಲದೆ ಮದುವೆ ಸಮಾರಂಭಗಳ ಮೇಲೂ ಪರಿಣಾಮ ಬೀರಿದೆ. ಜಿಲ್ಲೆಯಲ್ಲಿ ವಧು-ವರ ಸೇರಿದಂತೆ ಕೇವಲ ಏಳು ಜನರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

ಮಡಿಕೇರಿಯ ರಜಿತ್ ಮತ್ತು ಕಾಸರಗೋಡು ತಾಲೂಕಿನ ಗ್ರಾಮವೊಂದರ ಹುಡುಗಿ ಅನುಷಾಗೆ ಇಂದು ಮದುವೆ ನಿಶ್ಚಿತವಾಗಿತ್ತು. ಸುಳ್ಯದ ಪುರಭವನದಲ್ಲಿ ಮದುವೆ ನಿಗದಿಯಾಗಿತ್ತು. ಮದುವೆಗಾಗಿ ಐದುನೂರು ಜನರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿತ್ತು. ಪುರಭವನಕ್ಕೆ ಮುಂಗಡ ಹಣವಾಗಿ ಸಾವಿರಾರು ರೂಪಾಯಿಯನ್ನು ಕೊಡಲಾಗಿತ್ತು. ಅದ್ಧೂರಿ ಮದುವೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.

ಆದರೆ ಕೊರೊನಾ ವೈರಸ್‍ನಿಂದಾಗಿ ದೇಶವನ್ನು ಲಾಕ್‍ಡೌನ್ ಮಾಡಿರುವುದರಿಂದ ಮದುವೆಯ ಸ್ಥಳವನ್ನು ಬದಲಾಯಿಸಲಾಗಿದೆ. ಮಡಿಕೇರಿ ನಗರದ ಹೊರವಲಯದಲ್ಲಿರುವ ರಾಜರಾಜೇಶ್ವರಿ ದೇವಾಲಯದಲ್ಲಿ ಕೇವಲ ಏಳು ಜನರು ಮಾತ್ರವೇ ಮದುವೆಯಲ್ಲಿ ಭಾಗಿಯಾಗಿ ಮದುವೆ ನೆರವೇರಿಸಿದರು. ವಧು-ವರರ ತಂದೆ,ತಾಯಿ ಮತ್ತು ಅರ್ಚಕರು ಮಾತ್ರವೇ ಮದುವೆಯಲ್ಲಿ ಭಾಗಿಯಾಗಿದ್ದರು.

ವರ ರಜಿತ್ ಮಾತನಾಡಿ, ನಾವು 500 ಮದುವೆ ಆಮಂತ್ರಣ ಪತ್ರಿಕೆಯನ್ನು ನೀಡಲಾಗಿತ್ತು. ಕುಟುಂಬದ ಎಲ್ಲ ಸದಸ್ಯರ ಜೊತೆ ಸೇರಿ ಅದ್ಧೂರಿಯಾಗಿ ಮದುವೆ ಆಗಬೇಕೆಂಬ ಆಸೆ ಇತ್ತು. ಆದರೆ ಈ ಕೊರೊನಾ ವೈರಸ್‍ನಿಂದ ಇಡಿ ಜಗತ್ತಿನಲ್ಲಿ ಆಂತಕ ಉಂಟಾಗಿದೆ. ಹೀಗಾಗಿ ಈ ರೀತಿ ಸರಳವಾಗಿ ಮದುವೆ ಆಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *