ಕೊರೊನಾ ವಿರುದ್ಧದ ಹೋರಾಟಕ್ಕೆ ಡಾರ್ಲಿಂಗ್ ಪ್ರಭಾಸ್ 4 ಕೋಟಿ ರೂ. ದೇಣಿಗೆ

Public TV
2 Min Read

ಹೈದರಾಬಾದ್: ಬಾಹುಬಲಿ ಪ್ರಭಾಸ್ ಕೊರೊನಾ ವಿರುದ್ಧದ ಹೋರಾಟಕ್ಕೆ 4 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಗುರುವಾರ ಪ್ರಭಾಸ್ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ 3 ಕೋಟಿ ರೂ. ಹಾಗೂ ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಪ್ರಭಾಸ್ ಒಟ್ಟು ನಾಲ್ಕು ಕೋಟಿ ರೂ. ದಾನ ಮಾಡಿದ್ದಾರೆ.

 

View this post on Instagram

 

A post shared by Prabhas (@actorprabhas) on

ಪ್ರಭಾಸ್ ತಮ್ಮ ಮುಂಬರುವ ಚಿತ್ರದ ಚಿತ್ರೀಕರಣಕ್ಕಾಗಿ ಜಾರ್ಜಿಯಾಕ್ಕೆ ತೆರಳಿದ್ದಳು. ಈ ಚಿತ್ರಕ್ಕೆ ಪ್ರಭಾಸ್‍ಗೆ ನಾಯಕಿಯಾಗಿ ನಟಿ ಪೂಜಾ ಹೆಗ್ದೆ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಭಾಸ್ ಹಾಗೂ ಪೂಜಾ ಹೆಗ್ದೆ ಭಾರತಕ್ಕೆ ಹಿಂದಿರುಗಿದ್ದು, ಇಬ್ಬರು 14 ದಿನಗಳ ಕಾಲ ಸೆಲ್ಫ್ ಕ್ವಾರೆಂಟೈನ್‍ನಲ್ಲಿ ಇದ್ದಾರೆ.

ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಭಾರತ ಬಂದ್ ಆಗಿದೆ. ಇಡೀ ದೇಶದ ಜನರು ಕೋವಿಡ್ ವಿರುದ್ಧ ಹೋರಾಡಲು ಒಗ್ಗಟ್ಟಾಗಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಆರ್ಥಿಕ ಸಹಾಯ ಮಾಡುವಂತೆ ದೇಶದ ಜನರನ್ನು ಕೋರಿದ್ದಾರೆ. ಪಿಎಂ ಮತ್ತು ಸಿಎಂಗಳ ಮನವಿ ಸ್ಪಂದಿಸಿರುವ ಟಾಲಿವುಡ್ ನಾಯಕರು ಸರ್ಕಾರದ ನೆರವಿಗೆ ಬಂದಿದ್ದಾರೆ.

ನಟ ಪವನ್ ಕಲ್ಯಾಣ ಎರಡು ಕೋಟಿ ಆರ್ಥಿಕ ನೆರವು ನೀಡಿದ್ದರು. ಈ ಪೈಕಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ. ನೆರವು ನೀಡಿದ್ದಾರೆ. ಟಾಲಿವುಡ್‍ನ ಮತ್ತೋರ್ವ ನಟ ಮಹೇಶ್ ಬಾಬು ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ನೀಡಿ ಸಹಾಯ ಹಸ್ತ ಚಾಚಿದ್ದಾರೆ. ಪವನ್ ಕಲ್ಯಾಣ ಆರ್ಥಿಕ ಸಹಾಯ ಮಾಡಿದ್ದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರಿಂದ ಪ್ರೇರಣೆಗೊಂಡ ನಟ ರಾಮ್‍ಚರಣ್ 70 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದು, ಕೇಂದ್ರ ಸರ್ಕಾರ ಮತ್ತು ಆಂಧ್ರ ಪ್ರದೇಶ, ತೆಲಂಗಾಣ ಸರ್ಕಾರ ಪರಿಹಾರ ನಿಧಿಗೆ ಹಂಚಿಕೆ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *