ಕೊರೊನಾ ತಡೆಗೆ ಲಾಕ್ ಡೌನ್- ಆಹಾರಕ್ಕಾಗಿ ಜನ ಪರದಾಟ

Public TV
1 Min Read

ಗದಗ: ಕೊರೊನಾ ವೈರಸ್ ತಡೆಗೆ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಗದಗ ಜಿಲ್ಲೆಯಲ್ಲಿ ಬಡವರು ಆಹಾರಕ್ಕಾಗಿ ಪರದಾಡುತ್ತಿರುವುದು ಬೆಳಕಿಗೆ ಬಂದಿದೆ.

ಗದಗನ ಹೊಂಬಳ ನಾಕಾ ಜನತಾ ಕಾಲೋನಿ ಜನ ಆಹಾರಕ್ಕಾಗಿ ಗೋಳಾಡುತ್ತಿದ್ದಾರೆ. ಜಿಲ್ಲಾಧಿಕಾರಿ, ನಗರಸಭೆ ಅಧಿಕಾರಿಗಳಿಗೆ ಕೈಮುಗಿದು ಪರಿ ಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ. ಉಚಿತ ಹಾಲು ಇಲ್ಲ, ದಿನಸಿ, ಪಡಿತರ ಧಾನ್ಯವೂ ನೀಡಿಲ್ಲ ಅಂತ ವಿಡಿಯೋ ಮಾಡುವ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಲಾಕ್ ಡೌನ್ ಗೆ ನಮ್ಮ ಬೆಂಬಲವಿದೆ. ಆದರೆ ನಮ್ಮ ಹೊಟ್ಟೆಗೂ ಏನಾದ್ರೂ ಕೊಡಿ ಎಂದು ಊಟ, ಉಪಹಾರಕ್ಕಾಗಿ ಮಕ್ಕಳು, ವೃದ್ಧರು, ಮಹಿಳೆಯರ ಪರದಾಡುತ್ತಿದ್ದಾರೆ. ಅಲ್ಲದೆ ಈ ಬಗ್ಗೆ ತಾವೇ ವಿಡಿಯೋ ಮಾಡಿ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share This Article
Leave a Comment

Leave a Reply

Your email address will not be published. Required fields are marked *