ಖಾಕಿ ಮಾನವೀಯತೆ – ಮಾನಸಿಕ ಅಸ್ವಸ್ಥನಿಗೆ ಕಟಿಂಗ್, ಸ್ನಾನ ಮಾಡಿಸಿ, ಹೊಸ ಬಟ್ಟೆ ತೊಡಿಸಿದ ಪೇದೆ

Public TV
0 Min Read

ಚಾಮರಾಜನಗರ: ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನ ಕಷ್ಟಕ್ಕೆ ಪೊಲೀಸ್ ಪೇದೆಯೊಬ್ಬರು ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.

ಚಾಮರಾಜನಗರದ ಗ್ರಾಮಾಂತರ ಠಾಣೆಯ ಪೊಲೀಸ್ ಪೇದೆ ಶಿವಮೂರ್ತಿ ಅವರು ತಾಲೂಕಿನ ಶಿವಪುರ ಬಳಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನಿಗೆ ಸಹಾಯ ಮಾಡಿದ್ದಾರೆ. ಆತನಿಗೆ ಕಟಿಂಗ್ ಮಾಡಿಸಿದ್ದಲ್ಲದೇ, ಸ್ನಾನ ಮಾಡಿಸಿ, ಹೊಸ ಬಟ್ಟೆ ತೊಡಿಸಿ, ಗುಡಿಗೆ ಕರೆದೊಯ್ದು ದೇವರ ದರ್ಶನ ಮಾಡಿಸಿ ಅನಾಥ ಜೀವಕ್ಕೆ ನೆರವಾಗಿದ್ದಾರೆ.

ಅಷ್ಟೇ ಅಲ್ಲದೇ ಆತನಿಗೆ ಊಟದ ವ್ಯವಸ್ಥೆ ಮಾಡಿ ಲಾಕ್‍ಡೌನ್‍ನಲ್ಲಿ ಆಹಾರ ಸಿಗದೇ ನರಳುತ್ತಿದ್ದ ಜೀವಕ್ಕೆ ನೆರವಾಗಿದ್ದಾರೆ. ಪೇದೆಗೆ ಇತರೇ ಪೊಲೀಸ್ ಸಿಬ್ಬಂದಿ ಕೂಡ ಸಾಥ್ ನೀಡಿದ್ದು, ಪೊಲೀಸರ ಮಾನವೀಯತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *