ಎಸ್‍ಐ ಹರ್ಜಿತ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ- ವಿಡಿಯೋ ಟ್ವೀಟ್ ಮಾಡಿದ ಪಂಜಾಬ್ ಸಿಎಂ

Public TV
1 Min Read

ಚತ್ತೀಸ್‍ಗಢ: ಕೊರೊನಾ ವಿರುದ್ಧ ಹೋರಾಟದಲ್ಲಿ ದುಷ್ಕರ್ಮಿಗಳ ದಾಳಿಯಿಂದ ಕೈ ಕಳೆದುಕೊಂಡಿದ್ದ ಪೊಲೀಸ್ ಅಧಿಕಾರಿ ಹರ್ಜಿತ್ ಸಿಂಗ್ ಗುಣಮುಖರಾಗುತ್ತಿದ್ದಾರೆ ಎಂದು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಹರ್ಜಿತ್ ಸಿಂಗ್ ಅವರ ಕೈಗೆ ಮಾಡಲಾಗಿರುವ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸಂಪೂರ್ಣ ಚೇತರಿಕೆಯಾದ ಬಳಿಕ ಅವರ ಕೈ ಮೊದಲಿನಂತೆ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಅಮರಿಂದರ್ ಸಿಂಗ್ ವ್ಯಕ್ತಪಡಿಸಿದ್ದಾರೆ.

ಲಾಕ್‍ಡೌನ್ ಸಮಯದಲ್ಲಿ ಆದೇಶ ಉಲ್ಲಂಘಿಸಿ ಕಾರಿನಲ್ಲಿ ಅಲೆದಾಡುತ್ತಿದ್ದ ನಿಹಾಂಗ್ ಗುಂಪನ್ನ ಪೊಲೀಸರು ತಡೆದಿದ್ದರು. ಅಂದು ಕರ್ತವ್ಯದಲ್ಲಿದ್ದ ಹರ್ಜಿತ್ ಸಿಂಗ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ನಿಹಾಂಗ್ ಗುಂಪು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಘಟನೆಯಲ್ಲಿ ಹರ್ಜಿತ್ ಸಿಂಗ್ ತಮ್ಮ ಕೈ ಕಳೆದುಕೊಂಡಿದ್ದರು.

ಗಾಯಗೊಂಡಿದ್ದ ಹರ್ಜಿತ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಕೈ ತುಂಡಾಗಿದ್ದ ಕಾರಣ ಸತತ ಏಳುವರೆ ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿದ್ದ ವೈದ್ಯರು ಮತ್ತೆ ಕೈ ಜೋಡಿಸಲು ಯಶಸ್ವಿಯಾಗಿದ್ದರು. ಕಳೆದ 2 ವಾರಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸದ್ಯ ಚೇತರಿಸಿಕೊಂಡಿದ್ದಾರೆ.

ಸದ್ಯ ತಮ್ಮ ಆರೋಗ್ಯ ಕುರಿತು ಪ್ರತಿಕ್ರಿಯೆ ನೀಡಿರುವ ಹರ್ಜಿತ್ ಸಿಂಗ್, ಚಿಕಿತ್ಸೆ ನೀಡಿದ ವೈದ್ಯರ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಿಎಂ ಅಮರಿಂದರ್ ಸಿಂಗ್, ಹರ್ಜಿತ್ ಸಿಂಗ್ ಸದ್ಯ ತಮ್ಮ ಕೈಯನ್ನು ಮತ್ತೆ ಅಲುಗಾಡಿಸಲು ಯಶಸ್ವಿಯಾಗಿದ್ದಾರೆ ಎಂದು ಬರೆದಕೊಂಡು ವಿಡಿಯೋ ಶೇರ್ ಮಾಡಿದ್ದಾರೆ. ವಿಡಿಯೋದಲ್ಲಿ ಹರ್ಜಿತ್ ಸಿಂಗ್ ಅವರು ತುಂಡಾಗಿದ್ದ ಕೈ ಬೆರಳುಗಳನ್ನು ಯಶಸ್ವಿಯಾಗಿ ಅಲುಗಾಡಿಸಿರುವುದು ಕಾಣಬಹುದಾಗಿದೆ.

Share This Article
Leave a Comment

Leave a Reply

Your email address will not be published. Required fields are marked *