ನಾಳೆ ರಾಜ್ಯದಲ್ಲಿ ಕರ್ಫ್ಯೂ ಇಲ್ಲ

Public TV
1 Min Read

– ಮದ್ಯದಂಗಡಿ ಕೂಡ ಓಪನ್

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ನಾಳೆ ಕರ್ಫ್ಯೂವನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ.

ಭಾನುವಾರ ರಾಜ್ಯದಲ್ಲಿ ಯಾವುದೇ ಸಂಪೂರ್ಣ ಲಾಕ್‍ಡೌನ್ ಇಲ್ಲ. ಎಂದಿನಂತೆ ಎಲ್ಲಾ ಚಟವಟಿಕೆಗಳು ಇರಲಿದೆ ಎಂದು ಸಿಎಂ ಕಚೇರಿಯಿಂದ ಅಧಿಕೃತವಾಗಿ ಘೋಷಣೆಯಾಗಿದೆ.

ಪ್ರತಿ ದಿನದಂತೆ ಭಾನುವಾರ ಬಸ್ ಸಂಚಾರ ಇರುತ್ತೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಎಂದಿನಂತೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಸಂಚಾರ ಮಾಡಲಿದೆ. ಅಲ್ಲದೇ ಅಂತರ ರಾಜ್ಯ ಸಂಚಾರ ಕೂಡ ಇರುತ್ತದೆ. ಜೊತೆಗೆ ಆಟೋ, ಕ್ಯಾಬ್ ಎಲ್ಲ ಸಂಚಾರ ವ್ಯವಸ್ಥೆ ಕೂಡ ಇರುತ್ತದೆ.

ಹೋಟೆಲ್, ಸಲೂನ್, ತರಕಾರಿ, ದಿನಸಿ, ಬ್ಯೂಟಿ ಪಾರ್ಲರ್ ಸೇರಿದಂತೆ ಎಲ್ಲಾ ಅಂಗಡಿಗಳು ತೆರೆದಿರುತ್ತದೆ. ಅದೇ ರೀತಿ ಹೋಟೆಲ್‍ನಲ್ಲಿ ಪಾರ್ಸೆಲ್‍ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೂ ಪಾರ್ಕ್ ತೆರೆದಿರುತ್ತದೆ. ಜೊತೆಗೆ ಮದ್ಯದಂಗಡಿ ಕೂಡ ಓಪನ್ ಆಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *