ಮಾಜಿ ಸಿಎಂ ಎಚ್‍ಡಿಕೆಗೆ ನನ್ನ ಮೇಲೆ ವಿಶೇಷ ಪ್ರೀತಿ: ಸಚಿವ ಸುಧಾಕರ್

Public TV
2 Min Read

– ನನಗೂ ಕೂಡ ಎಚ್‍ಡಿಕೆ ಮೇಲೆ ವಿಶೇಷವಾದ ಗೌರವವಿದೆ

ಬೆಂಗಳೂರು: ಕೊರೊನಾ ನಿಯಂತ್ರಣ ಹಾಗೂ ಪ್ರವಾಹ ಪರಿಹಾರ ಕ್ರಮ ಕೈಗೊಳ್ಳಲು ಮೈ ಬಗ್ಗಿಸಿ ಕೆಲಸ ಮಾಡಿ ತೋರಿಸಿ ಎಂದು ಹೇಳಿದ್ದ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿಗೆ ಸಚಿವ ಸುಧಾಕರ್ ಟಾಂಗ್ ನೀಡಿದ್ದು, ಮಾಜಿ ಸಿಎಂ ಎಚ್‍ಡಿಕೆಗೆ ನನ್ನ ಮೇಲೆ ವಿಶೇಷ ಪ್ರೀತಿ ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ದಾರೆ.

ನಗರದ ಬಿಜೆಪಿ ಕಚೇರಿ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ನನಗೂ ಅವರ ಮೇಲೆ ವಿಶೇಷ ಗೌರವವಿದೆ ಅಷ್ಟೇ ಎಂದರು. ಇದನ್ನೂ ಓದಿ: ಮಾಧ್ಯಮಗಳ ಮುಂದೆ ಪೋಸ್ ಕೊಡೋದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ: ಹೆಚ್‍ಡಿಕೆ

ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕೊರೊನಾ ನಿಯಂತ್ರಣದ ಬಗ್ಗೆ ಮಾಹಿತಿ ಕೇಳಿದ್ದರು. ಸೋಮಕಿನ ನಿಯಂತ್ರಣಕ್ಕಾಗಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅವರಿಗೆ ವರದಿ ಕೊಟ್ಟಿದ್ದೇವೆ. ಅವರು ಕೂಡ ಈ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದರು. 65 ಸಾವಿರ ಇರುವ ಟೆಸ್ಟಿಂಗ್ ಸಂಖ್ಯೆಯನ್ನು 1 ಲಕ್ಷಕ್ಕೆ ಹೆಚ್ಚಿಸುವಂತೆ ಹೇಳಿದರು ಎಂದು ತಿಳಿಸಿದರು.

ನಂಜನಕೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ವೈದ್ಯಾಧಿಕಾರಿ ಆತ್ಮಹತ್ಯೆ ತನಿಖೆಗೆ ನಡೆಸಲು ನಮ್ಮ ತಕಾರರು ಇಲ್ಲ. ಈಗಾಗಲೇ ಸಿಎಂ ಅವರು ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅವರ ಧರ್ಮಪತ್ನಿ ಅವರನ್ನು ಸಬ್ ರಿಜಿಸ್ಟರ್ ಆಗಿ ನೇಮಕ ಮಾಡಲು ತೀರ್ಮಾನ ಮಾಡಲಾಗಿದೆ. ಉನ್ನತ ಮಟ್ಟದ ತನಿಖೆಗೂ ನಾವು ಒಪ್ಪುತ್ತೇವೆ. ಮೃತ ಅಧಿಕಾರಿಯ ಕುಟುಂಬದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಕುಟುಂಬ ಸದಸ್ಯರು ಯಾವ ರೀತಿ ತನಿಖೆ ನಡೆಸಲು ಕೇಳುತ್ತಾರೋ ಅದೇ ರೀತಿ ಮಾಡುತ್ತೇವೆ. ಆದರೆ ಕೆಲವರು ಈ ವಿಷಯವನ್ನು ಅನ್ಯ ವಿಷಯಗಳಿಗೆ ಬಳಸಿಕೊಂಡರೇ ಅದು ಅವರಿಗೆ ಉಪಯೋಗವಿಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *