ಮೇಘನಾ ರಾಜ್ ಬಳಿ ಕ್ಷಮೆ ಕೋರಿದ ಇಂದ್ರಜಿತ್ ಲಂಕೇಶ್

Public TV
1 Min Read

ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ನಟಿ ಮೇಘನಾ ರಾಜ್ ಅವರು ವಾಣಿಜ್ಯ ಮಂಡಳಿಗೆ ಬರೆದ ಪತ್ರದ ಬೆನ್ನಲ್ಲೇ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕ್ಷಮೆ ಕೋರಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಇಂದ್ರಜಿತ್, ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದರು. ಈಗಾಗಲೇ ನಾನು ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.

ಈ ಸಂಬಂಧ ನಾನು ಬಹಿರಂಗ ಕ್ಷಮೆಗೂ ಸಿದ್ಧನಿದ್ದೇನೆ. ಫಿಲಂ ಚೇಂಬರ್ ಗೆ ಹೋಗಿ ಅಥವಾ ಮೇಘನಾ ಮನೆಗೆ ಹೋಗಿ ಅವರನ್ನ ಭೇಟಿಯಾಗಿ ಕ್ಷಮೆಯಾಚಿಸಲು ಕೂಡ ರೆಡಿಯಾಗಿದ್ದೇನೆ. ಅಲ್ಲದೆ ಬಹಿರಂಗ ಕ್ಷಮೆಗೂ ತಯಾರಿದ್ದೇನೆ ಎಂದು ತಿಳಿಸಿದರು. ಇದನ್ನು ಓದಿ: ಅಕ್ಕನ ಕುರಿತು ಮಾತಾಡಿದ್ದು ದುಃಖ ತಂದಿದೆ- ಕಣ್ಣೀರು ಹಾಕಿದ ಇಂದ್ರಜಿತ್

ಮೇಘನಾ ಪತ್ರ:
ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನನಗೆ ನೋವಾಗಿದ್ದು, ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ನಟಿ ಮೇಘನಾ ರಾಜ್ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಇಂದು ಫಿಲಂ ಚೇಂಬರ್ ನಲ್ಲಿ ನಡೆದ ಸುದ್ದಿಗೋಷ್ಠಿಯ ವೇಳೆ ಎನ್.ಎಮ್ ಸುರೇಶ್ ಅವರು ಈ ಬಗ್ಗೆ ಪ್ರಸ್ತಾಪ ಮಾಡಿದ್ದರು.

ಪತ್ರದಲ್ಲಿ ಇಂದ್ರಜಿತ್ ಮಾತುಗಳ ನನಗೆ ಮಾನಸಿಕ ತೊಳಲಾಟಕ್ಕೆ ತಳ್ಳಿವೆ. ಗರ್ಭಿಣಿ ಆಗಿರುವ ನಾನು ಮಾನಸಿಕ ತೊಳಲಾಟದಲ್ಲಿದ್ದೇನೆ. ನನ್ನ ದಿವಂಗತ ಪತಿ ಮೇಲೆ ಇಂದ್ರಜಿತ್ ಆರೋಪ ಮಾಡಿದ್ದಾರೆ. ಇಂದ್ರಜಿತ್ ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಲಿ ಎಂದು ಪತ್ರದ ಮೂಲಕ ಒತ್ತಾಯಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *