ಬೆಂಗಳೂರು: ನಗರದ ಪೊಲೀಸರು ಕಾರ್ಯಚರಣೆ ನಡೆಸಿ ಕಲಬುರಗಿಯಲ್ಲಿ 1,300 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಈ ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗಾದೆ ಮಾತಿನ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ.
ಕಲ್ಬುರ್ಗಿಯಲ್ಲಿ ವಶಪಡಿಸಿಕೊಂಡ 1,200ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ @BJP4Karnataka ಕಾರ್ಯಕರ್ತ.
ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ
"ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ"
ಎಂಬ ಗಾದೆ ಮಾತಿನಂತೆ
ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ. pic.twitter.com/GQFNmxEPxU— Karnataka Congress (@INCKarnataka) September 11, 2020
ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಕಲ್ಬುರ್ಗಿಯಲ್ಲಿ ವಶಪಡಿಸಿಕೊಂಡ 1,200ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ. ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ “ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ” ಎಂಬ ಗಾದೆ ಮಾತಿನಂತೆ ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ ಎಂದು ಬರೆದುಕೊಂಡಿದೆ.
ಕಲಬುರಗಿಯಲ್ಲಿ 1,300 ಕೆಜಿ ಗಾಂಜಾವನ್ನು ಬೆಂಗಳೂರು ಪೊಲೀಸರು ಇಂದು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಈ ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ ಎಂಬುದು ದೃಢಪಟ್ಟಿದೆ. ಚಂದ್ರಕಾತ್ ಬಿಜೆಪಿಯ ಇತರೆ ಕಾರ್ಯಕರ್ತರ ಜೊತೆ ತೆಗೆದುಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಈ ಕುರಿತು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟ್ಟರ್ ನಲ್ಲಿ ಚಂದ್ರಕಾಂತ್ ಬಿಜೆಪಿ ಕಾರ್ಯಕರ್ತ ಎಂದು ಅವನ ಫೋಟೋ ಹಾಕಿ ಬಿಜೆಪಿ ನಾಯಕರ ಕಾಲೆಳೆದಿದ್ದರು.