ರೋಸ್ ಈರುಳ್ಳಿ ರಫ್ತು ಸ್ಥಗಿತ – ರಾಜ್ಯ ರೈತ ಮುಖಂಡರಿಂದ ಕೇಂದ್ರ ಸಚಿವರಿಗೆ ಮನವಿ

Public TV
1 Min Read

ನವದೆಹಲಿ: ರೋಸ್ ಈರುಳ್ಳಿ ರಫ್ತನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಹತ್ತು ಸಾವಿರ ಟನ್ ಈರುಳ್ಳಿ ಹಾಳಾಗಲಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡರಿಗೆ ರೈತರ ನಿಯೋಗ ಮನವಿ ಮಾಡಿದೆ.

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತ ಮುಖಂಡರು ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ಸದಾನಂದಗೌಡರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದರು.

ರಫ್ತು ಸ್ಥಗಿತ ಹಿನ್ನೆಲೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳೆದ ಸುಮಾರು 10 ಸಾವಿರ ಟನ್ ರೋಸ್ ಈರುಳ್ಳಿ ಹಾಳಾಗಲಿದೆ. ಇದರಿಂದ ರೈತರು ನಷ್ಟ ಅನುಭವಿಸಲಿದ್ದಾರೆ. ಹೀಗಾಗಿ ಸಂಬಂಧಿಸಿದ ಸಚಿವರೊಂದಿಗೆ ಮಾತುಕತೆ ನಡೆಸುವಂತೆ ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಸದಾನಂದಗೌಡರು, ಕೂಡಲೇ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕ ಸಚಿವರು ಹಾಗೂ ಕೃಷಿ ಸಚಿವರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *