ಹೊಲದಲ್ಲಿ ಮಕಾಡೆ ಮಲಗಿಸಿ ತಲೆ ಜಜ್ಜಿ ರೌಡಿ ಶೀಟರ್ ಬರ್ಬರ ಹತ್ಯೆ

Public TV
1 Min Read

– ಮೆದಳು ಸಮೇತ ರಾಗಿ ಹೊಲವೆಲ್ಲ ರಕ್ತಸಿಕ್ತ

ಬೆಂಗಳೂರು: ರಾಗಿ ಹೊಲದಲ್ಲಿ ಮಕಾಡೆ ಮಲಗಿಸಿ ತಲೆ ಜಜ್ಜಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಅರೆಹಳ್ಳಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಅತ್ತಿಬೆಲೆ ಪೊಲೀಸ್ ಠಾಣೆಯ ರೌಡಿ ಶೀಟರ್ ಬಳ್ಳೂರು ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಯಾರೋ ಈತನ ಮೇಲಿನ ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ಟಿ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ದೊಡ್ಡ ಕಲ್ಲಿನಿಂದ ತಲೆಯನ್ನು ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ನಿನ್ನೆ ಮನೆಯಲ್ಲಿದ್ದ ಶ್ರೀಕಾಂತ್‍ನನ್ನು ಮೂರರಿಂದ ನಾಲ್ಕು ಜನರು ಬಂದು ಕರೆದುಕೊಂಡು ಹೋಗಿದ್ದಾರೆ. ನಂತರ ಅತ್ತಿಬೆಲೆ ಬಳಿಯ ಅರೇಹಳ್ಳಿ ಎಂಬ ಗ್ರಾಮದ ರಾಗಿ ಹೊಲದಲ್ಲಿ ಪಾರ್ಟಿ ಮಾಡಿದ್ದಾರೆ. ಎಲ್ಲರೂ ಕಂಠಪೂರ್ತಿ ಕುಡಿದಿದ್ದಾರೆ. ಈ ವೇಳೆ ಯಾವುದೋ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ. ನಂತರ ಎಲ್ಲರೂ ಸೇರಿಕೊಂಡು ಶ್ರೀಕಾಂತ್ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಆತನನ್ನು ಮಕಾಡೆ ಮಲಗಿಸಿ ದೊಡ್ಡ ಕಲ್ಲಿನಿಂದ ತಲೆಯನ್ನು ಸಂಪೂರ್ಣವಾಗಿ ಜಜ್ಜಿ ಕೊಲೆ ಮಾಡಿದ್ದಾರೆ.

ಇಂದು ಬೆಳಿಗ್ಗೆ ಹೊಲಗಳಿಗೆ ಕೆಲಸಕ್ಕೆ ಎಂದು ಬಂದ ರೈತರು ಶವವನ್ನು ನೋಡಿದಾಗ ನಡೆದ ಘಟನೆ ಗೊತ್ತಾಗಿದ್ದು, ತಕ್ಷಣ ಅತ್ತಿಬೆಲೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸಹ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೊಡ್ಡ ಕಲ್ಲಿನಿಂದ ತಲೆಗೆ ಹೊಡೆದಿರೋದ್ರಿಂದ ತಲೆ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೊದಲು ಆತನನ್ನು ಗುರುತಿಸುವುದು ಕಷ್ಟವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *