ಸಾರಾ ಮಹೇಶ್ ಕೊಚ್ಚೆ ಗುಂಡಿ, ಕಲ್ಲೆಸೆದು ಹೊಲಸು ಮಾಡಿಕೊಳ್ಳಲ್ಲ- ಎಚ್.ವಿಶ್ವನಾಥ್

Public TV
1 Min Read

ಬೆಂಗಳೂರು: ಮಾಜಿ ಸಚಿವ ಸಾ.ರಾ.ಮಹೇಶ್ ಕೊಚ್ಚೆ ಗುಂಡಿ, ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಹೈ ಕೋರ್ಟ್ ತೀರ್ಪಿನ ಕುರಿತು ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಎಚ್.ವಿಶ್ವನಾಥ್ ವಿರುದ್ಧ ಕಿಡಿಕಾರಿ, ನ್ಯಾಯದೇವತೆ ಶಿಕ್ಷೆ ನೀಡಿದ್ದಾಳೆ ಎಂದು ಹೇಳಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಾರಾ ಮಹೇಶ್ ಕೊಚ್ಚೆ ಗುಂಡಿ, ಅವರ ಬಗ್ಗೆ ನಾನು ಮಾತಾಡಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ. ಪದೇ ಪದೇ ಕಲ್ಲೆಸೆದು ಶುಭ್ರ ಬಟ್ಟೆ ಕೊಳೆ ಮಾಡಿಕೊಳ್ಳುವುದಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಆಣೆ ಪ್ರಮಾಣವಾದ 1 ವರ್ಷಕ್ಕೆ ನ್ಯಾಯದೇವತೆಯಿಂದ ವಿಶ್ವನಾಥ್‌ಗೆ ಶಿಕ್ಷೆ – ಸಾರಾ ಮಹೇಶ್‌

ಸಾರಾ ಮಹೇಶನ ಕೊಚ್ಚೆ ಗುಂಡಿಗೆ ಕಲ್ಲು ಎಸೆದು ಪದೇ ಪದೇ ಕೊಳೆ ಮಾಡಿಕೊಳ್ಳಲು ನಾನು ಇಷ್ಟಪಡುವುದಿಲ್ಲ. ಇದರಿಂದ ನನ್ನ ಶುಭ್ರ ವಸ್ತ್ರವನ್ನು ಕೊಳೆ ಮಾಡಿಕೊಳ್ಳಲು ನಾನು ತಯಾರಿಲ್ಲ. ಯಾರ ಬಗ್ಗೆ ಏನು ಮಾತನಾಡಬೇಕು ಎಂಬ ಅರಿವಿಲ್ಲದೆ, ಬಾಯಿಗೆ ಬಂದಂತೆ ಮಾತನಾಡುವವರಿಗೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇದೇ ವೇಳೆ ಹೈ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ತೀರ್ಪಿನ ಪ್ರತಿ ಕೈ ಸೇರಿದ ಮೇಲೆ ವಕೀಲರೊಂದಿಗೆ ಚರ್ಚಿ ಮುಂದಿನ ಕ್ರಮ ಕೂಗೊಳ್ಳುತ್ತೇವೆ. ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವ ಕುರಿತು ಸಹ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *