ಮೊನ್ನೆಯಷ್ಟೇ ಆಯ್ಕೆಯಾಗಿದ್ದ ಗ್ರಾಮ ಪಂಚಾಯಿತಿ ನೂತನ ಸದಸ್ಯ ಸಾವು

Public TV
1 Min Read

ಚಿಕ್ಕಬಳ್ಳಾಪುರ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿದ್ದ ನೂತನ ಸದಸ್ಯ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ರಮಾಪುರದಲ್ಲಿ ನಡೆದಿದೆ.

ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರಮಾಪುರ ಗ್ರಾಮದಿಂದ ಸ್ಪರ್ಧಿಸಿದ್ದ 57 ವರ್ಷದ ಚಂದ್ರಣ್ಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೊಣಕಾಲಿನ ಶಸ್ತ್ರಚಿಕಿತ್ಸಗೆ ಓಳಗಾಗಿದ್ದ ಚಂದ್ರಣ್ಣ, ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಒಟ್ಟು 431 ಮತಗಳನ್ನು ಪಡೆದಿದ್ದ ಚಂದ್ರಣ್ಣ, ಸತತ ಮೂರನೇ ಬಾರಿಗೆ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಚಂದ್ರಣ್ಣ ಸಾವಿಗೆ ಕ್ಷೇತ್ರದ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಸಂತಾಪ ಸೂಚಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣಾ ಪ್ರಚಾರದಲ್ಲಿ ಸಾಕಷ್ಟು ಒಡಾಟ ಮಾಡಿದ್ದ ಚಂದ್ರಣ್ಣ ಅವರಿಗೆ ಮೊಣಕಾಲಿನ ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆಗೆಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *