ದೆಹಲಿ ರೈತರಲ್ಲಿ ಬಿರುಕು – ಪ್ರತಿಭಟನೆಯಿಂದ ಹಿಂದಕ್ಕೆ ಸರಿದ 2 ಪ್ರಮುಖ ಸಂಘಟನೆಗಳು

Public TV
1 Min Read

ನವದೆಹಲಿ: ಗಣರಾಜ್ಯೋತ್ಸವ ದಿನದಂದು ನಡೆದ ದಾಂಧಲೆ ಪ್ರಕರಣಕ್ಕೆ ರೈತ ಸಂಘಟನೆಗಳನ್ನೇ ನೇರ ಹೊಣೆ ಮಾಡಲು ಕೇಂದ್ರ ಗೃಹ ಸಚಿವಾಲಯ ಮುಂದಾಗುತ್ತಿದ್ದಂತೆ ಎರಡು ಪ್ರಮುಖ ರೈತ ಸಂಘಟನೆಗಳು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿವೆ.

ನಾನು ಈ ಪ್ರತಿಭಟನೆಯ ನೇತೃತ್ವವನ್ನು ವಹಿಸುವುದಿಲ್ಲ. ಈ ಪ್ರತಿಭಟನೆಯನ್ನು ನಾವು ಹಿಂದಕ್ಕೆ ಸರಿಯುತ್ತೇವೆ ಎಂದು ರಾಷ್ಟ್ರೀಯ ಕಿಸಾನ್‌ ಮಜ್ದೂರ್‌ ಸಂಘಟನೆ ಮುಖ್ಯಸ್ಥ ವಿಎಂ ಸಿಂಗ್‌ ಹೇಳಿದ್ದಾರೆ. ಬೇರೆಯವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ನನಗೆ ಏನು ಪಾತ್ರವಿಲ್ಲ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ಕಿಸಾನ್‌ ಸಂಘದ ಅಧ್ಯಕ್ಷ ಬಾನು ಪ್ರತಾಪ್‌ ಸಿಂಗ್‌ ಮಾತನಾಡಿ, ನಿನ್ನೆಯ ಘಟನೆಯಿಂದ ನನಗೆ ಬಹಳ ನೋವಾಗಿದೆ. ಹೀಗಾಗಿ 58 ದಿನಗಳ ಪ್ರತಿಭಟನೆಯನ್ನು ನಾವು ಕೊನೆಗೊಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಎರಡು ಪ್ರಮುಖ ಸಂಘಟನೆಗಳು ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುವ ಮೂಲಕ ರೈತರ ಸಂಘಟನೆಯಲ್ಲಿ ಬಿರುಕು ಮೂಡಿದೆ. ಹೀಗಿದ್ದರೂ ಈಗಾಗಲೇ ಬೆಂಬಲ ನೀಡಿರುವ ಸಂಘಟನೆಗಳು ನಾವು ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿವೆ.

Share This Article
Leave a Comment

Leave a Reply

Your email address will not be published. Required fields are marked *