ಡಬಲ್ ಮರ್ಡರ್ ಕೇಸ್ – ಮಗಳ ನಾಲಗೆಯನ್ನು ತುಂಡರಿಸಿ ತಿಂದಳು ತಾಯಿ

Public TV
1 Min Read

ತಿರುಪತಿ: ಆಂಧ್ರದ ಮದನಪಲ್ಲಿಯಲ್ಲಿ ಜನವರಿ 24ರಂದು ಹೆತ್ತವರೇ ಇಬ್ಬರು ಮಕ್ಕಳನ್ನು ಕೊಂದ ಪ್ರಕರಣದಲ್ಲಿ ಬೆಚ್ಚಿಬೀಳುವ ವಿಚಾರಗಳು ಬೆಳಕಿಗೆ ಬರುತ್ತಿವೆ. ತನ್ನನ್ನು ತಾಯಿ ಕಾಳಿಯ ಅಪರಾವತಾರ ಎಂದು ಭಾವಿಸಿಕೊಂಡ ನನ್ನ ಪತ್ನಿ ಪದ್ಮಜ, ದೊಡ್ಡ ಮಗಳು ಅಲೇಖ್ಯಾಳನ್ನು ಕೊಂದ ನಂತರ, ನಾಲಗೆಯನ್ನು ಕಟ್ ಮಾಡಿಕೊಂಡು ತಿಂದುಬಿಟ್ಟಳು’ ಎಂದು ಪುರುಷೋತ್ತಮ ನಾಯ್ಡು ಕಣ್ಣೀರಿಡುತ್ತಾ ವೈದ್ಯರ ಮುಂದೆ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಈ ವಿಚಾರದಲ್ಲಿ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.

ಪೂರ್ವಜನ್ಮದಲ್ಲಿ ನಂಬಿಕೆ ಇರಿಸಿದ್ದ ಅಲೇಖ್ಯಾ, ಅಪ್ಪ ನೀನು ಮಹಾಭಾರತ ನಡೆದಾಗ ಅರ್ಜುನನಾಗಿ ಜನಿಸಿದ್ದೆ. ಕಾಲೇಜಿಗೆ ಹೋಗಿ ಪಾಠ ಮಾಡುವುದು ನಿನ್ನ ವೃತ್ತಿ ಅಲ್ಲ. ಪಾಂಡವರ ಪರವಾಗಿ ಮುಂದೆ ನಿಂತು ನಡೆಸಿದ ಹೋರಾಟ ಸ್ಫೂರ್ತಿಯನ್ನು ಈಗಲೂ ಮುಂದುವರೆಸಿಕೊಂಡು ಹೋಗಬೇಕು ಎಂದು ಹೇಳುತ್ತಿದ್ದಳು ಎಂದು ಪುರುಷೋತ್ತಮ್ ನಾಯ್ಡು ವೈದ್ಯರಲ್ಲಿ ಹೇಳಿಕೊಂಡಿದ್ದಾರೆ.

ಕಲಿಯುಗ ಅಂತ್ಯವಾಗಿ ಸತ್ಯ ಯುಗ ಆರಂಭವಾಗಲಿದೆ. ಕೊರೊನಾ ಕೂಡ ಇದರ ಸೂಚಕ ಎಂದು ಮಗಳು ಅಲೇಖ್ಯಾ ಹೇಳುತ್ತಿದ್ದಳು. “ನನ್ನ ಮಗಳ ಮಾತುಗಳೆಲ್ಲಾ ಸತ್ಯ ನಾನು ಓದಿದ ಆಧ್ಯಾತ್ಮಿಕ ಪುಸ್ತಗಳಲ್ಲಿಯೂ ಈ ವಿಷಯಗಳೇ ಇವೆ” ಎಂದು ಪುರುಷೋತ್ತಮ್ ನಾಯ್ಡು ವೈದ್ಯರಲ್ಲಿ ಹೇಳಿದ್ದಾರೆ.

ವೈದ್ಯರ ಮುಂದೆಯೂ ಮಂತ್ರಪಠಣ ಮಾಡುತ್ತಿದ್ದ ಪದ್ಮಜ, “ನನ್ನ ಮಕ್ಕಳು ಮತ್ತೆ ಬದುಕಿ ಬರುತ್ತಾರೆ.. ಮನೆಗೆ ವಾಪಸ್ ಹೋಗಬೇಕು.. ಜೈಲಲ್ಲಿ ನನ್ನ ಜೊತೆ ಇದ್ದ ಶಿವ, ಕೃಷ್ಣ ಇಲ್ಲಿ ಕಾಣುತ್ತಿಲ್ಲ” ಎಂದು ಬಡಬಡಿಸುತ್ತಿದ್ದರು ಎನ್ನಲಾಗಿದೆ.

ಪುರುಷೋತ್ತಮ್ ನಾಯ್ಡು ಮತ್ತು ಪದ್ಮಜ ಇಬ್ಬರಿಗೂ ಮಾನಸಿಕ ಸಮಸ್ಯೆಯ ಲಕ್ಷಣಗಳು ಹೆಚ್ಚಿವೆ. ಸದ್ಯದ ಸಂದರ್ಭದಲ್ಲಿ ಜೈಲಿನಂತಹ ವಾತಾವರಣದಲ್ಲಿ ಅವರಿಗೆ ಚಿಕಿತ್ಸೆ ನೀಡಬೇಕು ಹೀಗಾಗಿ, ವಿಶಾಖಪಟ್ಟಣದ ಸರ್ಕಾರಿ ಮಾನಸಿಕ ಚಿಕಿತ್ಸಾ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ ಎಂದು ತಿರುಪತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇಬ್ಬರನ್ನು ಶುಕ್ರವಾರ ಮದನಪಲ್ಲಿಯ ಸಬ್ ಜೈಲಿನಿಂದ ತಿರುಪತಿಯ ಮೆಂಟಲ್ ಆಸ್ಪತ್ರೆಗೆ ಬಿಗಿ ಭದ್ರತೆಯಲ್ಲಿ ಕರೆತರಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *