ಕೋವಿಡ್ ನಿಯಮ ಉಲ್ಲಂಘಿಸಿ ಬಸವೇಶ್ವರ ಜಾತ್ರೆ- ಕೂಬಿಹಾಳದ 18 ಮಂದಿ ವಿರುದ್ಧ ಪ್ರಕರಣ ದಾಖಲು

Public TV
1 Min Read

ಹುಬ್ಬಳ್ಳಿ: ಕೊರೊನಾ ನಿಯಮ ಉಲ್ಲಂಘಿಸಿ ಕುಂದಗೋಳ ತಾಲೂಕಿನ ಕೂಬಿಹಾಳ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಆಚರಿಸಿದ ಆರೋಪದ ಮೇರೆಗೆ 18 ಮಂದಿ ಮೇಲೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಇಂದು ಪ್ರಕರಣ ದಾಖಲಾಗಿದೆ.

ರಾಮಪ್ಪ ಸಂಶಿ, ಸಿದ್ದಪ್ಪ ರಡ್ಡೇರ, ಹನಮಂತಪ್ಪ ವಡಕಣ್ಣವರ, ಮಂಜುನಾಥ ಪೂಜಾರ, ಯಲ್ಲಪ್ಪ ಹೆಬಸೂರ, ಚಂದ್ರಶೇಖರ ಪಾಲಕರ್, ಬಸಪ್ಪ ಹೊರಗಿನಮನಿ, ಬಸವರಾಜ ದೇಶಪಾಂಡೆ, ಯಲ್ಲಪ್ಪ ಬಿಳೆಬಲ್, ನಿಂಗಪ್ಪ ಬಾಚಣಕಿ, ಬಾಬುಖಾನ್ ನೂರಾಲಿಖಾನವರ, ಚೆನ್ನಬಸಪ್ಪ ರಡ್ಡೇರ, ಸುರೇಶ್ ಗೌಡ ಪಾಟೀಲ್, ವೀರಪಾಕ್ಷಯ್ಯ ಕುಮಾರಗೊಪ್ಪ, ಬಸನಗೌಡ ಶಿರಕೋಳ, ಶಿವಪ್ಪ ತಳವಾರ, ಜಗದೀಶ್ ಬಾಗಲ, ಬಸಪ್ಪ ಕುಂಬಾರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 3 ರಿಂದ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಚರಿಸಬಾರದು ಎಂದು ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದರು.

ಆದರೆ ಏಪ್ರಿಲ್ 13 ರಂದು ಈ ನಿಯಮ ಉಲ್ಲಂಘಿಸಿ, ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಕುಬಿಹಾಳ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಆಚರಿಸಲಾಗಿದೆ ಎಂದು ಕೂಬಿಹಾಳ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಬಸವರಾಜ್ ಬಾಗಲ ಪ್ರಕರಣ ಕುರಿತು ದೂರು ದಾಖಲಿಸಿದ್ದಾರೆ. ಕುಂದಗೋಳ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *