ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಸಲು ಅನುಮತಿ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಿರುವ ಕಠಿಣ ಲಾಕ್‍ಡೌನ್ ನಿಯಮದಲ್ಲಿ ಕೊಂಚ ವಿನಾಯಿತಿ ಕೊಡಲಾಗಿದ್ದು, ಜನ ಅವರವರ ಏರಿಯಾಗಳಲ್ಲಿ ದಿನಸಿ ಖರೀದಿ, ಹಣ್ಣು, ತರಕಾರಿ ಖರೀದಿಗೆ ವಾಹನಗಳನ್ನು ಬಳಸಬಹುದು ಎಂದು ಡಿಜಿ & ಐಜಿಪಿ ಪ್ರವೀಣ್ ಸೂದ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಈ ಕುರಿತು ಟ್ವಿಟ್ಟರ್‍ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರವೀಣ್ ಸೂದ್, ದಿನಸಿ ಖರೀದಿ, ಹಣ್ಣು, ಸೊಪ್ಪು, ತರಕಾರಿ ಖರೀದಿಗೆ ಸಾರ್ವಜನಿಕರಿಗೆ ನಿಮ್ಮ ನಿಮ್ಮ ಏರಿಯಾಗಳಲ್ಲಿ ವಾಹನ ಬಳಸಲು ಅನುಮತಿ ಕೊಡಲಾಗಿದೆ. ಆದರೆ ಅದೇ ಏರಿಯಾದಲ್ಲಿ ಮಾತ್ರ ವೆಹಿಕಲ್ ಬಳಸಲು ಅವಕಾಶ ಕೊಡಲಾಗಿದ್ದು, ಡಿಸ್ಕೌಂಟ್ ಲಾಕ್‍ಡೌನ್ ಅಂತಾ ಏರಿಯಾ ಬಿಟ್ಟು ಬೇರೆ ಕಡೆ ಹೋಗುವಂತಿಲ್ಲ. ಬೇರೆ ಏರಿಯಾಗಳೊಂದಿಗೆ ಅಕ್ಕಪಕ್ಕದ ಏರಿಯಾಗಳಿಗೂ ಸಹ ತೆರಳಲು ಅವಕಾಶವಿಲ್ಲ. ನಿಮ್ಮ ಏರಿಯಾ ಯಾವುದು ಇರುತ್ತೊ ಅದೇ ಏರಿಯಾದಲ್ಲಿ ವೆಹಿಕಲ್ ಬಳಸಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹತ್ತಿರದ ಅಂಗಡಿಗಳವರೆಗೆ ವಾಹನಗಳನ್ನು ಬಳಸಲು ಅವಕಾಶ ಇದ್ದು ಪ್ರತಿದಿನ ಇದೇ ನೆಪ ಇಟ್ಕೊಂಡು ಓಡಾಡುವಂತಿಲ್ಲ ಎಂದು ತಿಳಿಸಿದ್ದಾರೆ.

ಲಾಕ್‍ಡೌನ್ ಇದ್ದರೂ ಕೂಡ ಕೆಲಕುಂಟು ನೆಪಗಳನ್ನು ಹೇಳಿಕೊಂಡು ರಸ್ತೆಗಿಳಿದ ಸಾಕಷ್ಟು ವಾಹನಗಳನ್ನು ಇಂದು ರಾಜ್ಯಾದ್ಯಂತ ಪೊಲೀಸರು ಸೀಜ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *