ನಾಲಾಯಕ್ ಇಡು ಫೋನ್ ದೊಡ್ಡ ಕಿಸಾಮತಿ ಮಾಡ್ತಿ : ಸಿದ್ದು ಸವದಿ

Public TV
1 Min Read

ಬಾಗಲಕೋಟೆ: ಕೊರೊನಾದಿಂದ ಸಹೋದರನನ್ನು ಕಳೆದುಕೊಂಡ ವ್ಯಕ್ತಿ ಶಾಸಕರಿಗೆ ಕರೆ ಮಾಡಿ ಆಕ್ಸಿಜನ್ ವ್ಯವಸ್ಥೆ ಮಾಡಬೇಕು, ಸರ್ಕಾರಿ ಆಸ್ಪತ್ರೆಯ ಮುಂದೆ ಕೂರಬೇಕು ಹೇಳಿದ್ದಕ್ಕೆ ನಾಲಾಯಕ್ ಇಡು ಫೋನ್ ಎಂದು ತೆರದಾಳ ಶಾಸಕ ಸಿದ್ದು ಸವದಿ ಉದ್ದಟತನದ ಮಾತುಗಳನ್ನಾಡಿದ್ದಾರೆ.

ಸಂಜಯ್ ದೊಂಡಿಬಾಗ ಗಾಯಕವಾಡ(41) ಕೊರೊನಾ ದಿಂದ ಶನಿವಾರ ಸಾವನ್ನಪ್ಪಿದ್ದಾರೆ. ಇವರು ರಬಕವಿಬನಹಟ್ಟಿ ತಾಲ್ಲೂಕಿನ ಆಸಂಗಿ ಗ್ರಾಮದ ನಿವಾಸಿಯಾಗಿದ್ದಾರೆ. ಆಕ್ಸಿಜನ್ ಸಿಗದೇ ಸಂಜಯ್ ಸಾವನ್ನಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಂಜಯ್ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಬಾಗಲಕೋಟೆ ಜಮಖಂಡಿ ವಿಜಯಪುರಕ್ಕೆ ಅಲೆದಾಡಿದ್ದಾರೆ. ಕೊನೆಗೂ ಆಕ್ಸಿಜನ್ ಸಿಗದೆ ವಿಜಯಪುರದಲ್ಲಿ ಸಂಜಯ್ ಮೃತಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಸವದಿಯವರಿಗೆ ಕರೆ ಮಾಡಿದ ಮೃತನ ಸಹೋದರ ಅಶೋಕ್ ಮನೆಯಲ್ಲಿ ಕೂರಲು ನಿಮ್ಮನ್ನು ಆರಿಸಿ ಕಳುಹಿಸಿಲ್ಲ. ಆಕ್ಸಿಜನ್ ವ್ಯವಸ್ಥೆ ಮಾಡಬೇಕು. ಸರ್ಕಾರಿ ದವಾಖಾನೆ ಮುಂದೆ ಕುಳಿತುಕೊಳ್ಳಬೇಕು ಎಂದು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸವದಿ ನಾಲಾಯಕ್ ಇಡು ಫೋನ್ ದೊಡ್ಡ ಕಿಸಾಮತಿ ಮಾಡ್ತಿ… ಶಾಣ್ಯಾ ಅದಿ ಇಡು ಫೋನ್ ಎಂದು ಗರಂ ಆಗಿದ್ದಾರೆ.

ಸಹೋದರನನ್ನು ಕಳೆದುಕೊಂಡ ವ್ಯಕ್ತಿಗೆ ಸಮಾಧಾನದ ಮಾತುಗಳನ್ನಡುವುದು ಬಿಟ್ಟು ಉದ್ಧಟತನದ ಮಾತುಗಳನ್ನಾಡಿದ್ದಾರೆ ಎದಮು ಸವದಿ ವಿರುದ್ಧ ಆಕ್ರೋಶ ಹೋರಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *